ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಸಾಂಪ್ರದಾಯಿಕವಾಗಿ ಮಹಾಬಲೇಶ್ವರ ರಥೋತ್ಸವ ಜರುಗಿತು.
ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿಬೆಟ್ಟದಲ್ಲಿ ಮಹಾಬಲೇಶ್ವರ ರಥೋತ್ಸವ ಜರುಗಿದ್ದು, ಚಾಮುಂಡೇಶ್ವರಿ ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ನಡೆಸಿ ಮಹಾಬಲೇಶ್ವರ ರಥೋತ್ಸವ ಸಂಪನ್ನಗೊಂಡಿತು.
ರಥೋತ್ಸವದಲ್ಲಿ ಭಾಗಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಕುಟುಂಬ ದೇವರಿಗೆ ವಿಶೇಷ ಅರ್ಚನೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದರು.
ರಥೋತ್ಸವ ಆರಂಭಕ್ಕೂ ಮುನ್ನ ಪೊಲೀಸ್ ಬ್ಯಾಂಡ್ ವತಿಯಿಂದ ಮೈಸೂರು ಆಸ್ಥಾನ ಗೀತೆ ಕಾಯೌ ಶ್ರೀ ಗೌರಿ ಗೀತೆಯನ್ನು ನುಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ನೆರೆದಿದ್ದ ನೂರಾರು ಸಾರ್ವಜನಿಕರು ರಥೋತ್ಸವವನ್ನು ನೋಡಿ ಭಕ್ತಿ ಭಾವ ಮೆರೆದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…