ಮೈಸೂರು ನಗರ

ಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ಏಕಶಿಲೆಯ ಬೃಹತ್ ನಂದಿ ಮೂರ್ತಿಗೆ ಕಾರ್ತಿಕ ಮಾಸದ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಮಹಾಭಿಷೇಕ ಅದ್ಧೂರಿಯಾಗಿ ನೆರವೇರಿಸಲಾಯಿತು.

ಮಹಾಭಿಷೇಕದ ಬಣ್ಣಗಳಲ್ಲಿ ಮಿಂದೆದ್ದ ನಂದಿಯನ್ನು ಚಾಮುಂಡಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಕಣ್ತುಂಬಿಕೊಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಮಹಾಭಿಷೇಕಕ್ಕೆ ಬೆಳಿಗ್ಗೆ ೧೦.೦೧ಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥಾನಂದ ಸ್ವಾಮೀಜಿ ಹಾಗೂ ಹೊಸಮಠದ ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು.

ಇದನ್ನು ಓದಿಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಭೂಮಿ ಪೂಜೆ

ನಾದಸ್ವರ ಹಾಗೂ ಲಿಂಗಽರರ ‘ವೀರಭದ್ರೇಶ್ವರ ಕುಣಿತ’ದೊಂದಿಗೆ ಸ್ವಾಮೀಜಿಗಳನ್ನು ಬರಮಾಡಿಕೊಳ್ಳಲಾಯಿತು. ಪಂಚ ಕಲಶಕ್ಕೆ ಪೂಜೆ ಸಲ್ಲಿಸಿದ ನಂತರ ನಂದಿಯ ಅಂಗಳದಲ್ಲಿ ಬಿಲ್ವಪತ್ರೆ ಗಿಡ ನೆಡಲಾಯಿತು. ನಂದಿಯ ಮೇಲ್ಬಾಗದಲ್ಲಿ ಮಾಡಿದ್ದ ಅಟ್ಟಣಿಗೆಯ ಮೇಲೆ ನಿಂತು ೩೮ ವಿವಿಧ ಬಗೆಯ ಅಭಿಷೇಕಗಳನ್ನು ನಂದಿಯ ಮಸ್ತಕಕ್ಕೆ ಸ್ವಾಮೀಜಿಗಳು ಧಾರೆ ಎರೆದರು. ಪಾದ್ಯಂ, ಅರ್ಘ್ಯ, ಆಚಮನದ ನಂತರ ಪಂಚಾಮೃತಾಭಿಷೇಕ, ಫಲ ಪೂಜಾಮೃತ, ರಸಪಂಚಾಮೃತ, ಪಿಷ್ಟ ಪಂಚಕಾಭಿಷೇಕ, ಗಂಧ ಪಂಚಕಾಭಿಷೇಕ ನಡೆದವು.

ಹಾಲು, ಮೊಸರು, ತುಪ್ಪ, ಜೇನು ತುಪ್ಪ, ಸಕ್ಕರೆ, ಕದಳಿ, ದ್ರಾಕ್ಷಿ, ಬೇಲ, ಖರ್ಜೂರ, ಸೌತೆಕಾಯಿ, ಎಳನೀರು, ಕಬ್ಬಿನ ಹಾಲು, ನಿಂಬೆ, ಎಳ್ಳೆಣ್ಣೆ, ಪಾಯಸ, ಗೋಽ, ಕಡಲೆ, ಹೆಸರು ಹಿಟ್ಟು, ದರ್ಬೆ, ಪತ್ರೆ, ಕೇಸರಿ ಹಾಗೂ ಪುಷ್ಪ ಸೇರಿದಂತೆ ವಿವಿಧ ಬಗೆಯ ದ್ರವ್ಯಗಳ ಅಭಿಷೇಕವನ್ನು ನಂದಿಗೆ ಎರೆಯಲಾಯಿತು. ಒಂದೊಂದು ಅಭಿಷೇಕದಲ್ಲೂ ವಿವಿಧ ಬಣ್ಣಗಳಲ್ಲಿ ನಂದಿ ಮೂರ್ತಿ ಕಂಗೊಳಿಸಿತು.

ಕನಕ ಅಭಿಷೇಕ, ಪಂಚಾಮೃತ, ಶಾಲ್ಯಾನ್ನ, ಸುಗಂಧ ದ್ರವ್ಯ ಅಭಿಷೇಕ ಮತ್ತು ಪಂಚ ಕಲಶ ವಿಸರ್ಜನೆಯೊಂದಿಗೆ ಅಭಿಷೇಕ ಸಂಪನ್ನಗೊಂಡಿತು. ಅಷ್ಟೋತ್ತರ, ನೈವೇದ್ಯ ಅರ್ಪಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಒಂದೂವರೆ ತಾಸು ನಡೆದ ಅಭಿಷೇಕ ಕಣ್ತುಂಬಿಕೊಂಡ ಜನರು ಭಕ್ತಿಭಾವ ಮೆರೆದರು.

ಬಳಗದ ಅಧ್ಯಕ್ಷ ಎಸ್.ಪ್ರಕಾಶನ್, ಕಾರ್ಯದರ್ಶಿ ಎನ್.ಗೋವಿಂದ, ಖಜಾಂಚಿ ಶಂಕರ್ ಸೇರಿದಂತೆ ಸದಸ್ಯರು ಪಾಲ್ಗೊಂಡರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

2 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

54 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago