ಮೈಸೂರು ನಗರ

ಚಾಮುಂಡಿ ಬೆಟ್ಟದ ನಂದಿಗೆ ಮಹಾಭಿಷೇಕ

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ಏಕಶಿಲೆಯ ಬೃಹತ್ ನಂದಿ ಮೂರ್ತಿಗೆ ಕಾರ್ತಿಕ ಮಾಸದ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಮಹಾಭಿಷೇಕ ಅದ್ಧೂರಿಯಾಗಿ ನೆರವೇರಿಸಲಾಯಿತು.

ಮಹಾಭಿಷೇಕದ ಬಣ್ಣಗಳಲ್ಲಿ ಮಿಂದೆದ್ದ ನಂದಿಯನ್ನು ಚಾಮುಂಡಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಕಣ್ತುಂಬಿಕೊಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಮಹಾಭಿಷೇಕಕ್ಕೆ ಬೆಳಿಗ್ಗೆ ೧೦.೦೧ಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥಾನಂದ ಸ್ವಾಮೀಜಿ ಹಾಗೂ ಹೊಸಮಠದ ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು.

ಇದನ್ನು ಓದಿಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಭೂಮಿ ಪೂಜೆ

ನಾದಸ್ವರ ಹಾಗೂ ಲಿಂಗಽರರ ‘ವೀರಭದ್ರೇಶ್ವರ ಕುಣಿತ’ದೊಂದಿಗೆ ಸ್ವಾಮೀಜಿಗಳನ್ನು ಬರಮಾಡಿಕೊಳ್ಳಲಾಯಿತು. ಪಂಚ ಕಲಶಕ್ಕೆ ಪೂಜೆ ಸಲ್ಲಿಸಿದ ನಂತರ ನಂದಿಯ ಅಂಗಳದಲ್ಲಿ ಬಿಲ್ವಪತ್ರೆ ಗಿಡ ನೆಡಲಾಯಿತು. ನಂದಿಯ ಮೇಲ್ಬಾಗದಲ್ಲಿ ಮಾಡಿದ್ದ ಅಟ್ಟಣಿಗೆಯ ಮೇಲೆ ನಿಂತು ೩೮ ವಿವಿಧ ಬಗೆಯ ಅಭಿಷೇಕಗಳನ್ನು ನಂದಿಯ ಮಸ್ತಕಕ್ಕೆ ಸ್ವಾಮೀಜಿಗಳು ಧಾರೆ ಎರೆದರು. ಪಾದ್ಯಂ, ಅರ್ಘ್ಯ, ಆಚಮನದ ನಂತರ ಪಂಚಾಮೃತಾಭಿಷೇಕ, ಫಲ ಪೂಜಾಮೃತ, ರಸಪಂಚಾಮೃತ, ಪಿಷ್ಟ ಪಂಚಕಾಭಿಷೇಕ, ಗಂಧ ಪಂಚಕಾಭಿಷೇಕ ನಡೆದವು.

ಹಾಲು, ಮೊಸರು, ತುಪ್ಪ, ಜೇನು ತುಪ್ಪ, ಸಕ್ಕರೆ, ಕದಳಿ, ದ್ರಾಕ್ಷಿ, ಬೇಲ, ಖರ್ಜೂರ, ಸೌತೆಕಾಯಿ, ಎಳನೀರು, ಕಬ್ಬಿನ ಹಾಲು, ನಿಂಬೆ, ಎಳ್ಳೆಣ್ಣೆ, ಪಾಯಸ, ಗೋಽ, ಕಡಲೆ, ಹೆಸರು ಹಿಟ್ಟು, ದರ್ಬೆ, ಪತ್ರೆ, ಕೇಸರಿ ಹಾಗೂ ಪುಷ್ಪ ಸೇರಿದಂತೆ ವಿವಿಧ ಬಗೆಯ ದ್ರವ್ಯಗಳ ಅಭಿಷೇಕವನ್ನು ನಂದಿಗೆ ಎರೆಯಲಾಯಿತು. ಒಂದೊಂದು ಅಭಿಷೇಕದಲ್ಲೂ ವಿವಿಧ ಬಣ್ಣಗಳಲ್ಲಿ ನಂದಿ ಮೂರ್ತಿ ಕಂಗೊಳಿಸಿತು.

ಕನಕ ಅಭಿಷೇಕ, ಪಂಚಾಮೃತ, ಶಾಲ್ಯಾನ್ನ, ಸುಗಂಧ ದ್ರವ್ಯ ಅಭಿಷೇಕ ಮತ್ತು ಪಂಚ ಕಲಶ ವಿಸರ್ಜನೆಯೊಂದಿಗೆ ಅಭಿಷೇಕ ಸಂಪನ್ನಗೊಂಡಿತು. ಅಷ್ಟೋತ್ತರ, ನೈವೇದ್ಯ ಅರ್ಪಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಒಂದೂವರೆ ತಾಸು ನಡೆದ ಅಭಿಷೇಕ ಕಣ್ತುಂಬಿಕೊಂಡ ಜನರು ಭಕ್ತಿಭಾವ ಮೆರೆದರು.

ಬಳಗದ ಅಧ್ಯಕ್ಷ ಎಸ್.ಪ್ರಕಾಶನ್, ಕಾರ್ಯದರ್ಶಿ ಎನ್.ಗೋವಿಂದ, ಖಜಾಂಚಿ ಶಂಕರ್ ಸೇರಿದಂತೆ ಸದಸ್ಯರು ಪಾಲ್ಗೊಂಡರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago