ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು.
ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್ ಟ್ರಸ್ಟ್ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿದ್ದು, ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ ದ್ರವ್ಯಗಳು ಸೇರಿದಂತೆ 38 ವಿಧಗಳಲ್ಲಿ ಅಭಿಷೇಕ ನೆರವೇರಿಸಲಾಯಿತು.
ಈ ನಂದಿ ವಿಗ್ರಹವು 1659 ರಿಂದ 1673ರವರೆಗೆ ಮೈಸೂರು ಸಂಸ್ಥಾನವನ್ನಾಳಿದ ದೊಡ್ಡ ದೇವರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿದ್ದು, 350ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದೆ.
ಇದನ್ನು ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯ ಮೂಲಕ ಹತ್ತುವಾಗ 700 ಮೆಟ್ಟಿಲುಗಳ ಬಳಿ ಏಕಶಿಲಾ ಮೂರ್ತಿಯನ್ನಾಗಿ ಕೆತ್ತನೆ ಮಾಡಲಾಗಿದೆ. ಅಲ್ಲದೇ ಈ ವಿಗ್ರಹವು 16 ಅಡಿ ಎತ್ತರ ಹಾಗೂ 25 ಅಡಿ ಉದ್ದವಿದೆ.
ಚಾಮುಂಡಿ ಬೆಟ್ಟದಲ್ಲಿರುವ ಈ ನಂದಿ ವಿಗ್ರಹವು ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ದೇವಾಲಯದ ನಂದಿ ಹಾಗೂ ಆಂಧ್ರ ಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನದ ನಂದಿಯನ್ನು ಬಿಟ್ಟರೆ, ಇದೇ ದೇಶದ ಮೂರನೇ ನಂದಿ ವಿಗ್ರಹವಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…