ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು.
ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್ ಟ್ರಸ್ಟ್ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿದ್ದು, ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ ದ್ರವ್ಯಗಳು ಸೇರಿದಂತೆ 38 ವಿಧಗಳಲ್ಲಿ ಅಭಿಷೇಕ ನೆರವೇರಿಸಲಾಯಿತು.
ಈ ನಂದಿ ವಿಗ್ರಹವು 1659 ರಿಂದ 1673ರವರೆಗೆ ಮೈಸೂರು ಸಂಸ್ಥಾನವನ್ನಾಳಿದ ದೊಡ್ಡ ದೇವರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿದ್ದು, 350ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದೆ.
ಇದನ್ನು ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯ ಮೂಲಕ ಹತ್ತುವಾಗ 700 ಮೆಟ್ಟಿಲುಗಳ ಬಳಿ ಏಕಶಿಲಾ ಮೂರ್ತಿಯನ್ನಾಗಿ ಕೆತ್ತನೆ ಮಾಡಲಾಗಿದೆ. ಅಲ್ಲದೇ ಈ ವಿಗ್ರಹವು 16 ಅಡಿ ಎತ್ತರ ಹಾಗೂ 25 ಅಡಿ ಉದ್ದವಿದೆ.
ಚಾಮುಂಡಿ ಬೆಟ್ಟದಲ್ಲಿರುವ ಈ ನಂದಿ ವಿಗ್ರಹವು ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ದೇವಾಲಯದ ನಂದಿ ಹಾಗೂ ಆಂಧ್ರ ಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನದ ನಂದಿಯನ್ನು ಬಿಟ್ಟರೆ, ಇದೇ ದೇಶದ ಮೂರನೇ ನಂದಿ ವಿಗ್ರಹವಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…