ಮೈಸೂರು: ಟ್ಯಾಲೆಂಟ್ ಹಂಟ್ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್ನಲ್ಲಿ ಮೈಸೂರು ವಾರಿಯರ್ಸ್ಅನ್ನು ಪ್ರತಿನಿಧಿಸಲಿದ್ದಾರೆ.
ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್ ಆಟಗಾರರು ಭಾಗವಹಿಸಿದ್ದರು.
ಎನ್.ಆರ್.ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸುವ ಯುವ ಆಟಗಾರರನ್ನು ಆಯ್ಕೆ ಮಾಡಲು ಮೈಸೂರಿನ ಎಸ್ಡಿಎನ್ಆರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ 55 ಮಧ್ಯಮ ವರ್ಗದ ಬೌಲರ್ಗಳು, 50 ಸ್ಪಿನ್ನರ್ಗಳು, 40 ಬ್ಯಾಟ್ಸ್ಮನ್ಗಳು, 40 ಆಲ್ರೌಂಡರ್ಗಳು ಮತ್ತು 40 ವಿಕೆಟ್ ಕೀಪರ್ಗಳು ಸೇರಿದಂತೆ ಒಟ್ಟು 200 ಯುವ ಕ್ರಿಕೆಟಿಗರು ಭಾಗಿಯಾಗಿದ್ದರು.
ಆಯ್ಕೆಯಾದ ಇಬ್ಬರು ಆಟಗಾರರು 15 ದಿನಗಳ ಕಠಿಣ ತರಬೇತಿಗೆ ಒಳಗಾಗಿದ್ದಾರೆ. ಆ ಬಳಿಕ ಆಗಸ್ಟ್.15ರಿಂದ ಸೆಪ್ಟೆಂಬರ್1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ.
ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಜೊತೆಗೆ ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ಒಳಗೊಂಡು ಕರ್ನಾಟಕದ ಒಟ್ಟು ಆರು ತಂಡಗಳು ಸ್ಪರ್ಧಿಸಲಿವೆ.
ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ವಾರಿಯರ್ಸ್ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್ ರಂಗ ಅವರು, ಎನ್.ಆರ್ ಗ್ರೂಪ್ ಯುವ ಕ್ರಿಕೆಟ್ ಪ್ರತಿಭಾವಂತರಿಗೆ ಸೂಕ್ತ ವೇದಿಕೆ ಒದಗಿಸಿ, ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಿ ಅವರು ರಾಜ್ಯವನ್ನು ಪ್ರತಿನಿಧಿಸುವಷ್ಟರ ಮಟ್ಟಿಗೆ ಬೆಳೆಸಲು ಬದ್ಧವಾಗಿದೆ. ಇಂದು ನಾವು ಹಲವು ಪ್ರತಿಭೆಗಳ ಅಸಾಧಾರಣ ಕೌಶಲ್ಯಗಳನ್ನು ನೋಡಿದ್ದೇವೆ. ಅವರು ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಿ ಯಶಸ್ಸು ಗಳಿಸುವುದನ್ನು ನೋಡಲು ಉತ್ಸುಕರಾಗಿದ್ದೇವೆ ಎಂದು ಹೇಳಿದರು.
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…
ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್ಐಸಿಗೆ ಸೇರಿದ ಜಾಗದಲ್ಲಿ…
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…