ಮೈಸೂರು ನಗರ

ಮಹಾರಾಜ ಟ್ರೋಫಿ 2024 : ಮೈಸೂರಿನಲ್ಲಿ ಟ್ಯಾಲೆಂಟ್‌ ಹಂಟ್‌

ಮೈಸೂರು: ಟ್ಯಾಲೆಂಟ್‌ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ.

ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್‌ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್‌ ಆಟಗಾರರು ಭಾಗವಹಿಸಿದ್ದರು.

ಎನ್‌.ಆರ್.ಗ್ರೂಪ್‌, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ಪ್ರತಿನಿಧಿಸುವ ಯುವ ಆಟಗಾರರನ್ನು ಆಯ್ಕೆ ಮಾಡಲು ಮೈಸೂರಿನ ಎಸ್‌ಡಿಎನ್‌ಆರ್‌ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ 55 ಮಧ್ಯಮ ವರ್ಗದ ಬೌಲರ್‌ಗಳು, 50 ಸ್ಪಿನ್ನರ್‌ಗಳು, 40 ಬ್ಯಾಟ್ಸ್‌ಮನ್‌ಗಳು, 40 ಆಲ್‌ರೌಂಡರ್‌ಗಳು ಮತ್ತು 40 ವಿಕೆಟ್‌ ಕೀಪರ್‌ಗಳು ಸೇರಿದಂತೆ ಒಟ್ಟು 200 ಯುವ ಕ್ರಿಕೆಟಿಗರು ಭಾಗಿಯಾಗಿದ್ದರು.

ಆಯ್ಕೆಯಾದ ಇಬ್ಬರು ಆಟಗಾರರು 15 ದಿನಗಳ ಕಠಿಣ ತರಬೇತಿಗೆ ಒಳಗಾಗಿದ್ದಾರೆ. ಆ ಬಳಿಕ ಆಗಸ್ಟ್.‌15ರಿಂದ ಸೆಪ್ಟೆಂಬರ್‌1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ತಂಡದ ಪರವಾಗಿ ಆಡಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ.

ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‌ ತಂಡದ ಜೊತೆಗೆ ಹುಬ್ಬಳ್ಳಿ ಟೈಗರ್ಸ್‌, ಬೆಂಗಳೂರು ಬ್ಲಾಸ್ಟರ್ಸ್‌, ಮಂಗಳೂರು ಡ್ರಾಗನ್ಸ್‌, ಗುಲ್ಬರ್ಗಾ ಮಿಸ್ಟಿಕ್ಸ್‌ ಮತ್ತು ಶಿವಮೊಗ್ಗ ಲಯನ್ಸ್‌ ಒಳಗೊಂಡು ಕರ್ನಾಟಕದ ಒಟ್ಟು ಆರು ತಂಡಗಳು ಸ್ಪರ್ಧಿಸಲಿವೆ.

ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ವಾರಿಯರ್ಸ್‌ ಮಾಲೀಕ ಮತ್ತು ಸೈಕಲ್‌ ಪ್ಯೂರ್‌ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್‌ ರಂಗ ಅವರು, ಎನ್‌.ಆರ್‌ ಗ್ರೂಪ್‌ ಯುವ ಕ್ರಿಕೆಟ್‌ ಪ್ರತಿಭಾವಂತರಿಗೆ ಸೂಕ್ತ ವೇದಿಕೆ ಒದಗಿಸಿ, ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಿ ಅವರು ರಾಜ್ಯವನ್ನು ಪ್ರತಿನಿಧಿಸುವಷ್ಟರ ಮಟ್ಟಿಗೆ ಬೆಳೆಸಲು ಬದ್ಧವಾಗಿದೆ. ಇಂದು ನಾವು ಹಲವು ಪ್ರತಿಭೆಗಳ ಅಸಾಧಾರಣ ಕೌಶಲ್ಯಗಳನ್ನು ನೋಡಿದ್ದೇವೆ. ಅವರು ಮೈಸೂರು ವಾರಿಯರ್ಸ್‌ ತಂಡದ ಪರವಾಗಿ ಆಡಿ ಯಶಸ್ಸು ಗಳಿಸುವುದನ್ನು ನೋಡಲು ಉತ್ಸುಕರಾಗಿದ್ದೇವೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago