ಮೈಸೂರು ನಗರ

ಮಹಾರಾಜ ಟ್ರೋಫಿ 2024 : ಮೈಸೂರಿನಲ್ಲಿ ಟ್ಯಾಲೆಂಟ್‌ ಹಂಟ್‌

ಮೈಸೂರು: ಟ್ಯಾಲೆಂಟ್‌ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ.

ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್‌ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್‌ ಆಟಗಾರರು ಭಾಗವಹಿಸಿದ್ದರು.

ಎನ್‌.ಆರ್.ಗ್ರೂಪ್‌, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ಪ್ರತಿನಿಧಿಸುವ ಯುವ ಆಟಗಾರರನ್ನು ಆಯ್ಕೆ ಮಾಡಲು ಮೈಸೂರಿನ ಎಸ್‌ಡಿಎನ್‌ಆರ್‌ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ 55 ಮಧ್ಯಮ ವರ್ಗದ ಬೌಲರ್‌ಗಳು, 50 ಸ್ಪಿನ್ನರ್‌ಗಳು, 40 ಬ್ಯಾಟ್ಸ್‌ಮನ್‌ಗಳು, 40 ಆಲ್‌ರೌಂಡರ್‌ಗಳು ಮತ್ತು 40 ವಿಕೆಟ್‌ ಕೀಪರ್‌ಗಳು ಸೇರಿದಂತೆ ಒಟ್ಟು 200 ಯುವ ಕ್ರಿಕೆಟಿಗರು ಭಾಗಿಯಾಗಿದ್ದರು.

ಆಯ್ಕೆಯಾದ ಇಬ್ಬರು ಆಟಗಾರರು 15 ದಿನಗಳ ಕಠಿಣ ತರಬೇತಿಗೆ ಒಳಗಾಗಿದ್ದಾರೆ. ಆ ಬಳಿಕ ಆಗಸ್ಟ್.‌15ರಿಂದ ಸೆಪ್ಟೆಂಬರ್‌1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ತಂಡದ ಪರವಾಗಿ ಆಡಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ.

ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‌ ತಂಡದ ಜೊತೆಗೆ ಹುಬ್ಬಳ್ಳಿ ಟೈಗರ್ಸ್‌, ಬೆಂಗಳೂರು ಬ್ಲಾಸ್ಟರ್ಸ್‌, ಮಂಗಳೂರು ಡ್ರಾಗನ್ಸ್‌, ಗುಲ್ಬರ್ಗಾ ಮಿಸ್ಟಿಕ್ಸ್‌ ಮತ್ತು ಶಿವಮೊಗ್ಗ ಲಯನ್ಸ್‌ ಒಳಗೊಂಡು ಕರ್ನಾಟಕದ ಒಟ್ಟು ಆರು ತಂಡಗಳು ಸ್ಪರ್ಧಿಸಲಿವೆ.

ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ವಾರಿಯರ್ಸ್‌ ಮಾಲೀಕ ಮತ್ತು ಸೈಕಲ್‌ ಪ್ಯೂರ್‌ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್‌ ರಂಗ ಅವರು, ಎನ್‌.ಆರ್‌ ಗ್ರೂಪ್‌ ಯುವ ಕ್ರಿಕೆಟ್‌ ಪ್ರತಿಭಾವಂತರಿಗೆ ಸೂಕ್ತ ವೇದಿಕೆ ಒದಗಿಸಿ, ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಿ ಅವರು ರಾಜ್ಯವನ್ನು ಪ್ರತಿನಿಧಿಸುವಷ್ಟರ ಮಟ್ಟಿಗೆ ಬೆಳೆಸಲು ಬದ್ಧವಾಗಿದೆ. ಇಂದು ನಾವು ಹಲವು ಪ್ರತಿಭೆಗಳ ಅಸಾಧಾರಣ ಕೌಶಲ್ಯಗಳನ್ನು ನೋಡಿದ್ದೇವೆ. ಅವರು ಮೈಸೂರು ವಾರಿಯರ್ಸ್‌ ತಂಡದ ಪರವಾಗಿ ಆಡಿ ಯಶಸ್ಸು ಗಳಿಸುವುದನ್ನು ನೋಡಲು ಉತ್ಸುಕರಾಗಿದ್ದೇವೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago