ಮೈಸೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಾಲಯಗಳತ್ತ ಸಾರ್ವಜನಿಕರ ದಂಡೇ ಹರಿದು ಬರುತ್ತಿದೆ.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಸ್ಥಾನ, ರಾಮನುಜ ರಸ್ತೆಯಲ್ಲಿರುವ ಕಾಮಕಾಮೇಶ್ವರಿ ದೇವಸ್ಥಾನ, ಮಾತೃಮಂಡಳಿ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನ, ಲಿಂಗಾಂಬುದಿಪಾಳ್ಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ, ಕನ್ನೇಗೌಡನಕೊಪ್ಪಲು ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ, ಚಾಮುಂಡಿಪುರಂನ ರಾಮಲಿಂಗೇಶ್ವರ ದೇವಸ್ಥಾನ, ಹಳೆ ಸಂತೇಪೇಟೆಯಲ್ಲಿರುವ ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಧನ್ವಂತ್ರಿ ರಸ್ತೆಯಲ್ಲಿರುವ ದೇವಸ್ಥಾನ, ಸುಣ್ಣದಕೇರಿಯಲ್ಲಿರುವ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಇನ್ನಿತರ ದೇವಸ್ಥಾನಗಳಿಗೆ ಸಾರ್ವಜನಕರ ದಂಡೇ ಹರಿದು ಬರುತ್ತಿದೆ.
ಮುಂಜಾನೆಯಿಂದಲೂ ದೇವಾಲಯಗಳಿಗೆ ಜನರ ದಂಡೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದೇಗುಲಗಳಿಗೆ ಆಗಮಿಸುತ್ತಿರುವ ಜನತೆ ಬಿಲ್ವಪತ್ರೆ ಸೇರಿದಂತೆ ಶಿವನಿಗೆ ಪ್ರಿಯವಾದ ಹೂವುಗಳನ್ನು ಅರ್ಪಿಸಿ ದರ್ಶನ ಪಡೆಯುತ್ತಿದ್ದಾರೆ.
ಮಹಾಶಿವರಾತ್ರಿ ಪ್ರಯುಕ್ತ ಕೆಲ ದೇವಾಲಯಗಳಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳುತ್ತಿದ್ದಾರೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…