ಮೈಸೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಾಲಯಗಳತ್ತ ಸಾರ್ವಜನಿಕರ ದಂಡೇ ಹರಿದು ಬರುತ್ತಿದೆ.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಸ್ಥಾನ, ರಾಮನುಜ ರಸ್ತೆಯಲ್ಲಿರುವ ಕಾಮಕಾಮೇಶ್ವರಿ ದೇವಸ್ಥಾನ, ಮಾತೃಮಂಡಳಿ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನ, ಲಿಂಗಾಂಬುದಿಪಾಳ್ಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ, ಕನ್ನೇಗೌಡನಕೊಪ್ಪಲು ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ, ಚಾಮುಂಡಿಪುರಂನ ರಾಮಲಿಂಗೇಶ್ವರ ದೇವಸ್ಥಾನ, ಹಳೆ ಸಂತೇಪೇಟೆಯಲ್ಲಿರುವ ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಧನ್ವಂತ್ರಿ ರಸ್ತೆಯಲ್ಲಿರುವ ದೇವಸ್ಥಾನ, ಸುಣ್ಣದಕೇರಿಯಲ್ಲಿರುವ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಇನ್ನಿತರ ದೇವಸ್ಥಾನಗಳಿಗೆ ಸಾರ್ವಜನಕರ ದಂಡೇ ಹರಿದು ಬರುತ್ತಿದೆ.
ಮುಂಜಾನೆಯಿಂದಲೂ ದೇವಾಲಯಗಳಿಗೆ ಜನರ ದಂಡೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದೇಗುಲಗಳಿಗೆ ಆಗಮಿಸುತ್ತಿರುವ ಜನತೆ ಬಿಲ್ವಪತ್ರೆ ಸೇರಿದಂತೆ ಶಿವನಿಗೆ ಪ್ರಿಯವಾದ ಹೂವುಗಳನ್ನು ಅರ್ಪಿಸಿ ದರ್ಶನ ಪಡೆಯುತ್ತಿದ್ದಾರೆ.
ಮಹಾಶಿವರಾತ್ರಿ ಪ್ರಯುಕ್ತ ಕೆಲ ದೇವಾಲಯಗಳಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳುತ್ತಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…