ಮೈಸೂರು ನಗರ

ಮಹಿಷಾ ದಸರಾ: ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ, ಬನ್ನಿ ನೋಡೆ ಬಿಡೋಣ ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ.

ಈಗಾಗಲೇ ಮಾಜಿ ಸಂಸದ ಪ್ರತಾಪ್‌ ಸಿಂಹ ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ಸಂಸದರಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ಮಹಿಷನ ಪುಷ್ಪಾರ್ಚನೆ ವಿಚಾರವಾಗಿ ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರಿಕಾ ವರದಿ ಉಲ್ಲೇಖಿಸಿ ಪೋಸ್ಟ್‌ ಹಂಚಿಕೊಂಡು ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಕಿಡಿಕಾರಿದ್ದಾರೆ.

ಮಹಿಷ ದಸರಾ ಹೆಸರಿನಲ್ಲಿ ಚಾಮುಂಡೇಶ್ವರಿ ತಾಯಿಗೆ ನಿಂದಿಸುತ್ತಾರೆ. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಡಬಾರದು. ಇಲ್ಲಿಯವರೆಗೂ ಮಹಿಷ ದಸರಾ ಆಚರಣೆಗೆ ಒಮ್ಮೆ ಮಾತ್ರ ಪುಷ್ಪಾರ್ಚನೆಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಚಾಮುಂಡಿ ತಾಯಿಗೆ ನಿಂದಿಸಿದ್ದರಿಂದ ಆಕ್ಷೇಪ ವ್ಯಕ್ತವಾಗಿ ಇಲ್ಲಿಯವರೆಗೂ ಬೆಟ್ಟದಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಮಹಿಷ ದಸರಾ ಆಚರಣೆಯಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿದರೆ ಚಾಮುಂಡಿ ಚಲೋ ಮಾಡುವುದಾಗಿ ಪ್ರತಾಪ್‌ ಸಿಂಹ ಸವಾಲು ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago