ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ ಮೇಲಾಗುತ್ತಾ ಚಾಮುಂಡಿ ಭಕ್ತರ ಕೈ ಮೇಲಾಗುತ್ತಾ ನೋಡೇ ಬಿಡೋಣ ಎಂದು ಸವಾಲು ಹಾಕಿದರು.
ಮಹಿಷನ ಮೇಲೆ ನಂಬಿಕೆ ಇದ್ದರೆ ಮನೆಯಲ್ಲೇ ಪೂಜೆ ಮಾಡಿಕೊಳ್ಳಲಿ. ಹಿಂದೂ ಸಮಾಜವಾಗಿ ನಾವೆಲ್ಲಾ ಒಟ್ಟಾಗಿ ಇರೋಣ. ಮಹಿಷ ದಸರಾ ಹೆಸರಿನಲ್ಲಿ ಒಡಕು ಮೂಡಿಸಿಕೊಳ್ಳುವುದು ಬೇಡ. ಮಹಿಷ ದಸರಾ ಮಾಡಲು ಚಾಮುಂಡಿಬೆಟ್ಟ ಸರಿಯಾದ ಜಾಗ ಅಲ್ಲ ಎಂದರು.
ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಮಾಡುತ್ತೇವೆ ಎಂದರೆ ಚಾಮುಂಡಿ ಭಕ್ತರು ಕೂಡ ಅಂದೇ ಚಾಮುಂಡಿ ಚಲೋ ಮಾಡುತ್ತೇವೆ ಎಂದು ಸವಾಲು ಹಾಕಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…