ಮೈಸೂರು ನಗರ

ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ: ಪ್ರೊ.ಭಗವಾನ್ ಭಾಷಣ

ಮೈಸೂರು: ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ ಎಂದು ಪ್ರೊಫೆಸರ್‌ ಭಗವಾನ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಚತುರ್ವರ್ಣ ಇದೇ. ಇದರಲ್ಲಿ ನಾಲ್ಕನೇ ವರ್ಣ ಶೂದ್ರ. ಶೂದ್ರ ಅಂದ್ರೆ ಗುಲಾಮರು. ಶೂದ್ರ ಅಂದ್ರೆ ಏನು ಎಂಬುದನ್ನು ಮನುಸ್ಮೃತಿಯೇ ಬೇರೆ ರೀತಿಯಲ್ಲಿ ಹೇಳುತ್ತೆ. ಹಿಂದೂ ಧರ್ಮವನ್ನು ಸ್ವಾಮಿ ವಿವೇಕಾನಂದರು ಟೀಕೆ ಮಾಡಿರುವಷ್ಟು ಅಂಬೇಡ್ಕರ್ ಕೂಡ ಮಾಡಿಲ್ಲ. ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ. ಇದು ಸ್ವಾಮಿ ವಿವೇಕಾನಂದ ಹೇಳಿರೋದು.

ಇದನ್ನು ಓದಿ : ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ

ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. 1925 ಪೆರಿಯಾರ್ ಸ್ವಾಭಿಮಾನಿ ಚಳುವಳಿ ಮಾಡಿದ್ರು. ತಮಿಳುನಾಡಿನಲ್ಲಿ ಚಳುವಳಿ ಮಾಡಿ ಬ್ರಾಹ್ಮಣರ ಹಿಡಿತ ತಪ್ಪಿಸಿದರು. ಕರ್ನಾಟಕದಲ್ಲಿ ಬಸವಣ್ಣ ಮಾಡಿದ್ರು. ಆದ್ರೆ ಜನ ಸರಿಯಾಗಿ ಇದನ್ನು ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರೂ ಜಾತಿ ವಿನಾಶ ಪುಸ್ತಕ ಓದಿ ಸರಿಯಾದ ಧರ್ಮ ಯಾವುದು ಎಂದು ತಿಳಿದುಕೊಳ್ಳಲು ಬುದ್ಧ ಮತ್ತು ಧಮ್ಮ ಪುಸ್ತಕ ಓದಿ. ಐಸ್ಟಿನ್ ಕೂಡ ಬುದ್ಧ ಧಮ್ಮ ಕುರಿತು ಹೊಗಳಿದ್ದಾರೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಸಿದ್ದರಾಜು ಅವರು, ಜಾತಿ ಕಲಂನಲ್ಲಿ ಹಿಂದೂ ಅಂತ ಬರೆಸಬೇಡಿ. ಬೌದ್ಧ ಅಂತ ಬರೆಸಿ. ಆನೆ ಶಾಂತಿಯ ಸಂಕೇತ. ಮುಂದಿನ ದಿನಗಳಲ್ಲಿ ದಸರಾದಲ್ಲಿ ಆನೆಯ ಮೇಲೆ ಸಂವಿಧಾನ ಇಟ್ಟು ಮೆರವಣಿಗೆ ಮಾಡಬೇಕು. ಈಗ ಬುದ್ಧ ಬಸವ ಅಂಬೇಡ್ಕರ್ ಇದೆ. ಇನ್ನು ಮುಂದೆ. ಬುದ್ಧ ಅಂಬೇಡ್ಕರ್ ಅಶೋಕ ಇರಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

1 hour ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

1 hour ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

2 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

2 hours ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

2 hours ago