ಮೈಸೂರು ನಗರ

ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ: ಪ್ರೊ.ಭಗವಾನ್ ಭಾಷಣ

ಮೈಸೂರು: ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ ಎಂದು ಪ್ರೊಫೆಸರ್‌ ಭಗವಾನ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಚತುರ್ವರ್ಣ ಇದೇ. ಇದರಲ್ಲಿ ನಾಲ್ಕನೇ ವರ್ಣ ಶೂದ್ರ. ಶೂದ್ರ ಅಂದ್ರೆ ಗುಲಾಮರು. ಶೂದ್ರ ಅಂದ್ರೆ ಏನು ಎಂಬುದನ್ನು ಮನುಸ್ಮೃತಿಯೇ ಬೇರೆ ರೀತಿಯಲ್ಲಿ ಹೇಳುತ್ತೆ. ಹಿಂದೂ ಧರ್ಮವನ್ನು ಸ್ವಾಮಿ ವಿವೇಕಾನಂದರು ಟೀಕೆ ಮಾಡಿರುವಷ್ಟು ಅಂಬೇಡ್ಕರ್ ಕೂಡ ಮಾಡಿಲ್ಲ. ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ. ಇದು ಸ್ವಾಮಿ ವಿವೇಕಾನಂದ ಹೇಳಿರೋದು.

ಇದನ್ನು ಓದಿ : ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ

ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. 1925 ಪೆರಿಯಾರ್ ಸ್ವಾಭಿಮಾನಿ ಚಳುವಳಿ ಮಾಡಿದ್ರು. ತಮಿಳುನಾಡಿನಲ್ಲಿ ಚಳುವಳಿ ಮಾಡಿ ಬ್ರಾಹ್ಮಣರ ಹಿಡಿತ ತಪ್ಪಿಸಿದರು. ಕರ್ನಾಟಕದಲ್ಲಿ ಬಸವಣ್ಣ ಮಾಡಿದ್ರು. ಆದ್ರೆ ಜನ ಸರಿಯಾಗಿ ಇದನ್ನು ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರೂ ಜಾತಿ ವಿನಾಶ ಪುಸ್ತಕ ಓದಿ ಸರಿಯಾದ ಧರ್ಮ ಯಾವುದು ಎಂದು ತಿಳಿದುಕೊಳ್ಳಲು ಬುದ್ಧ ಮತ್ತು ಧಮ್ಮ ಪುಸ್ತಕ ಓದಿ. ಐಸ್ಟಿನ್ ಕೂಡ ಬುದ್ಧ ಧಮ್ಮ ಕುರಿತು ಹೊಗಳಿದ್ದಾರೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಸಿದ್ದರಾಜು ಅವರು, ಜಾತಿ ಕಲಂನಲ್ಲಿ ಹಿಂದೂ ಅಂತ ಬರೆಸಬೇಡಿ. ಬೌದ್ಧ ಅಂತ ಬರೆಸಿ. ಆನೆ ಶಾಂತಿಯ ಸಂಕೇತ. ಮುಂದಿನ ದಿನಗಳಲ್ಲಿ ದಸರಾದಲ್ಲಿ ಆನೆಯ ಮೇಲೆ ಸಂವಿಧಾನ ಇಟ್ಟು ಮೆರವಣಿಗೆ ಮಾಡಬೇಕು. ಈಗ ಬುದ್ಧ ಬಸವ ಅಂಬೇಡ್ಕರ್ ಇದೆ. ಇನ್ನು ಮುಂದೆ. ಬುದ್ಧ ಅಂಬೇಡ್ಕರ್ ಅಶೋಕ ಇರಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago