ಮೈಸೂರು ನಗರ

ಮಹಿಷಾ ಮಂಡಲೋತ್ಸವ : ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ದಲಿತರ ಆಗ್ರಹ

ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ.

ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ ವೇಳೆ ಚಾಮುಂಡಿ ಬೆಟ್ಟದ ಮಹಿಷನ ಹತ್ತಿರ ನಿಷೇಧಾಜ್ಞೆ ಮಾಡಿರುವುದನ್ನು ದಲಿತತು ಒಕ್ಕೊರಲಿನಿಂದ ಖಂಡಿಸಿದರು.

ಈ ಸಂದರ್ಭದಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್‌ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮ ಮುಗಿದ ನಂತರ ಸಮಿತಿಯ 5 ಜನ ಮುಂಖಡರನ್ನು ಕರೆದುಕೊಂಡು ಹೋಗಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರೆ ಸರಿ, ಇಲ್ಲವಾದರೆ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಂತಮಲ್ಲಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ ಮಾತನಾಡಿ, ಮಹಿಷನ ಪ್ರತಿಮೆಗೆ ಬಣ್ಣ ಹೊಡೆಯಲಾಗಿದೆ. ಹೀಗಾಗಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದರು. ಈ ಮಾತನ್ನು ಕೇಳಿದ ಮಹಿಷ ಭಕ್ತರು ಸ್ಥಳದಲ್ಲಿಯೇ ಧಿಕ್ಕಾರ ಕೂಗಿ, ನೀವು ಅವಕಾಶ ನೀಡದಿದ್ದರೆ, ನಾವೇ ಹೋಗುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮಯ ಗೊಂದಲ ಉಂಟಾದಾಗ ಎಸಿಪಿ, ಕಮೀಷನರ್‌ ಬರುತ್ತಾರೆ ಎಂದು ಅಲ್ಲಿಂದ ಹೊರ ನಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

32 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

36 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

41 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

47 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago