ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ.
ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ ವೇಳೆ ಚಾಮುಂಡಿ ಬೆಟ್ಟದ ಮಹಿಷನ ಹತ್ತಿರ ನಿಷೇಧಾಜ್ಞೆ ಮಾಡಿರುವುದನ್ನು ದಲಿತತು ಒಕ್ಕೊರಲಿನಿಂದ ಖಂಡಿಸಿದರು.
ಈ ಸಂದರ್ಭದಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮ ಮುಗಿದ ನಂತರ ಸಮಿತಿಯ 5 ಜನ ಮುಂಖಡರನ್ನು ಕರೆದುಕೊಂಡು ಹೋಗಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರೆ ಸರಿ, ಇಲ್ಲವಾದರೆ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಂತಮಲ್ಲಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ ಮಾತನಾಡಿ, ಮಹಿಷನ ಪ್ರತಿಮೆಗೆ ಬಣ್ಣ ಹೊಡೆಯಲಾಗಿದೆ. ಹೀಗಾಗಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದರು. ಈ ಮಾತನ್ನು ಕೇಳಿದ ಮಹಿಷ ಭಕ್ತರು ಸ್ಥಳದಲ್ಲಿಯೇ ಧಿಕ್ಕಾರ ಕೂಗಿ, ನೀವು ಅವಕಾಶ ನೀಡದಿದ್ದರೆ, ನಾವೇ ಹೋಗುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಮಯ ಗೊಂದಲ ಉಂಟಾದಾಗ ಎಸಿಪಿ, ಕಮೀಷನರ್ ಬರುತ್ತಾರೆ ಎಂದು ಅಲ್ಲಿಂದ ಹೊರ ನಡೆದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…