ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ.
ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ ವೇಳೆ ಚಾಮುಂಡಿ ಬೆಟ್ಟದ ಮಹಿಷನ ಹತ್ತಿರ ನಿಷೇಧಾಜ್ಞೆ ಮಾಡಿರುವುದನ್ನು ದಲಿತತು ಒಕ್ಕೊರಲಿನಿಂದ ಖಂಡಿಸಿದರು.
ಈ ಸಂದರ್ಭದಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮ ಮುಗಿದ ನಂತರ ಸಮಿತಿಯ 5 ಜನ ಮುಂಖಡರನ್ನು ಕರೆದುಕೊಂಡು ಹೋಗಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರೆ ಸರಿ, ಇಲ್ಲವಾದರೆ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಂತಮಲ್ಲಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ ಮಾತನಾಡಿ, ಮಹಿಷನ ಪ್ರತಿಮೆಗೆ ಬಣ್ಣ ಹೊಡೆಯಲಾಗಿದೆ. ಹೀಗಾಗಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದರು. ಈ ಮಾತನ್ನು ಕೇಳಿದ ಮಹಿಷ ಭಕ್ತರು ಸ್ಥಳದಲ್ಲಿಯೇ ಧಿಕ್ಕಾರ ಕೂಗಿ, ನೀವು ಅವಕಾಶ ನೀಡದಿದ್ದರೆ, ನಾವೇ ಹೋಗುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಮಯ ಗೊಂದಲ ಉಂಟಾದಾಗ ಎಸಿಪಿ, ಕಮೀಷನರ್ ಬರುತ್ತಾರೆ ಎಂದು ಅಲ್ಲಿಂದ ಹೊರ ನಡೆದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…