ಮೈಸೂರು ನಗರ

ಮಹಿಷಾ ಮಂಡಲೋತ್ಸವ : ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ದಲಿತರ ಆಗ್ರಹ

ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ.

ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ ವೇಳೆ ಚಾಮುಂಡಿ ಬೆಟ್ಟದ ಮಹಿಷನ ಹತ್ತಿರ ನಿಷೇಧಾಜ್ಞೆ ಮಾಡಿರುವುದನ್ನು ದಲಿತತು ಒಕ್ಕೊರಲಿನಿಂದ ಖಂಡಿಸಿದರು.

ಈ ಸಂದರ್ಭದಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್‌ ಸ್ವಾಮೀಜಿ ಮಾತನಾಡಿ, ಕಾರ್ಯಕ್ರಮ ಮುಗಿದ ನಂತರ ಸಮಿತಿಯ 5 ಜನ ಮುಂಖಡರನ್ನು ಕರೆದುಕೊಂಡು ಹೋಗಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರೆ ಸರಿ, ಇಲ್ಲವಾದರೆ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಂತಮಲ್ಲಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ ಮಾತನಾಡಿ, ಮಹಿಷನ ಪ್ರತಿಮೆಗೆ ಬಣ್ಣ ಹೊಡೆಯಲಾಗಿದೆ. ಹೀಗಾಗಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದರು. ಈ ಮಾತನ್ನು ಕೇಳಿದ ಮಹಿಷ ಭಕ್ತರು ಸ್ಥಳದಲ್ಲಿಯೇ ಧಿಕ್ಕಾರ ಕೂಗಿ, ನೀವು ಅವಕಾಶ ನೀಡದಿದ್ದರೆ, ನಾವೇ ಹೋಗುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮಯ ಗೊಂದಲ ಉಂಟಾದಾಗ ಎಸಿಪಿ, ಕಮೀಷನರ್‌ ಬರುತ್ತಾರೆ ಎಂದು ಅಲ್ಲಿಂದ ಹೊರ ನಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago