ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲೇ ಆಚರಿಸಲ್ಪಡುವ ಮಹಿಷ ಮಂಡಲೋತ್ಸವವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಆಯೋಜಿಸಲಾಗಿದೆ.
ಚಾಮುಂಡಿಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರ್ಬಂಧ ವಿಧಿಸಿ ಪುರಭವನದ ಆವರಣದೊಳಗೆ ನಡೆಯುವ ವೇದಿಕೆ ಕಾರ್ಯ ಕ್ರಮಕ್ಕೆ ಸೀಮಿತಗೊಳಿಸಿ ಅನುಮತಿ ನೀಡಲಾಗಿದೆ.
ಪುರಭವನದ ಆವರಣ ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿರುವ ಕಾರಣ ಅದಕ್ಕೆ ತಕ್ಕಂತೆ ಕಾರ್ಯಕ್ರಮ ನಡೆಯಲಿದೆ. ಇಂದು(ಸೆ.29) ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಗಾಂಧಿ ನಗರದ ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ಬುದ್ಧವಿಹಾರದ ಬೋಽದತ್ತ ಬಂತೇಜಿ ಉಪಸ್ಥಿತಿಯಲ್ಲಿ ಚಿಂತಕ ಯೋಗೀಶ್ ಮಾಸ್ಟರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪ್ರಗತಿಪರ ಚಿಂತಕ ಶಿವಸುಂದರ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಾಹಿತಿ ಪ್ರೊ. ಕೆ. ಎಸ್. ಭಗವಾನ್, ಇತಿಹಾಸ ತಜ್ಞ ಪ್ರೊ. ಪಿ. ವಿ. ನಂಜರಾಜ ಅರಸ್, ಸಿದ್ದಸ್ವಾಮಿ, ಡಾ. ಕೃಷ್ಣಮೂರ್ತಿ ಚಮರಂ ಪಾಲ್ಗೊಳ್ಳಲಿದ್ದಾರೆ. ದಲಿತ ಮತ್ತು ಪ್ರಗತಿಪರ ಸಂಘಟನೆಗಳು, ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ ಹಾಗೂ ಅಂಬೇಡ್ಕರ್ ಸಂಘಟನೆಗಳ ಅಧ್ಯಕ್ಷರು, ಮುಖಂಡರು, ಪದಾಽಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…