ಮೈಸೂರು ನಗರ

ಸಿಎಂ ಪತ್ನಿ ಮುಡಾ ಸೈಟ್‌ ವಾಪಸ್‌ ನೀಡಲು ಇಲ್ಲಿದೆ ಮುಖ್ಯ ಕಾರಣ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸ್ವಇಚ್ಛೆಯಿಂದ ತಮ್ಮ 14 ಬದಲಿ ನಿವೇಶನಗಳನ್ನು ವಶ ಪಡಿಸಿಕೊಳ್ಳುವಂತೆ ಪತ್ರ ಬರೆದು ಮುಡಾಕ್ಕೆ ವಾಪಸ್‌ ನೀಡಲು ಪಿಎಂಎಲ್‌ಎ ಕಾಯ್ದೆ 15 ಸೆಕ್ಷನ್‌ ಮಹತ್ವದ್ದಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ನನಗೆ ಯಾವುದೇ ಭಯವಿಲ್ಲ. ತಾನು ಹೋರಾಟಕ್ಕೆ ಸದಾ ಸಿದ್ದ ಅದನ್ನೇ ಮಾಡುತ್ತೇನೆ ಹೊರತು ರಾಜೀನಾಮೆ ಮಾತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಇದೀಗ ಸಿಎಂ ಅವರ ಪತ್ನಿ ನಿವೇಶನಗಳನ್ನು ವಾಪಸ್‌ ಮುಡಾಗೆ ಹಿಂತಿರುಗಿಸಿರುವುದು ಪ್ರಕರಣಕ್ಕೆ ದೊಡ್ಡ ತಿರುವನ್ನು ನೀಡಿದೆ. ಸಿಎಂ ಪತ್ನಿಯ ಈ ನಿರ್ಧಾರಕ್ಕೆ ವಿರೋಧ ಪಕ್ಷದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ದ್ವೇಷ ರಾಜಕಾರಣದಿಂದ ಮಾತ್ರ ಸಾಧ್ಯ ಎಂದು ಕಾಂಗ್ರೆಸ್‌ ನಾಯಕ ಆರೋಪಿಸುತ್ತಿದ್ದಾರೆ.

ಮುಡಾ ಹಗರಣ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಹಿಂತಿರುಗಿಸಲು ಮುಖ್ಯವಾಗಿ ಮನಸ್ಸು ಮಾಡಲು ಜಾರಿ ನಿರ್ದೇಶಾಲಯದ 2003ರ ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್‌ 15ರ ಅಡಿಯಲ್ಲಿ ದಾಖಲಿಸಿರುವ ಪ್ರಕರಣವೇ ಕಾರಣ ಎನ್ನಲಾಗಿದೆ.

ಈ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದ್ದು, ಯಾವುದೇ ನ್ಯಾಯಾಲಯದ ಆದೇಶ ಪಡೆಯಬೇಕು ಎಂಬ ನಿಯಮವಿಲ್ಲ. ಜೊತೆಗೆ ಇದರಲ್ಲಿ ಸಂಬಂಧಪಟ್ಟ ಆಸ್ತಿಗಾಗಿ ಹಣಕಾಸು ಅಕ್ರಮ ವರ್ಗಾವಣೆ ನಡೆದಿದೆ ಎಂದು ತನಿಖಾಧಿಕಾರಿಗಳಿಗೆ ಅನಿಸಿದರೆ ಮಾತ್ರ ಆ ಅಧಿಕಾರಿಗಳು 180 ದಿನಗಳವರೆಗೂ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

16 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

30 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

1 hour ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

2 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

5 hours ago