ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸ್ವಇಚ್ಛೆಯಿಂದ ತಮ್ಮ 14 ಬದಲಿ ನಿವೇಶನಗಳನ್ನು ವಶ ಪಡಿಸಿಕೊಳ್ಳುವಂತೆ ಪತ್ರ ಬರೆದು ಮುಡಾಕ್ಕೆ ವಾಪಸ್ ನೀಡಲು ಪಿಎಂಎಲ್ಎ ಕಾಯ್ದೆ 15 ಸೆಕ್ಷನ್ ಮಹತ್ವದ್ದಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ನನಗೆ ಯಾವುದೇ ಭಯವಿಲ್ಲ. ತಾನು ಹೋರಾಟಕ್ಕೆ ಸದಾ ಸಿದ್ದ ಅದನ್ನೇ ಮಾಡುತ್ತೇನೆ ಹೊರತು ರಾಜೀನಾಮೆ ಮಾತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಇದೀಗ ಸಿಎಂ ಅವರ ಪತ್ನಿ ನಿವೇಶನಗಳನ್ನು ವಾಪಸ್ ಮುಡಾಗೆ ಹಿಂತಿರುಗಿಸಿರುವುದು ಪ್ರಕರಣಕ್ಕೆ ದೊಡ್ಡ ತಿರುವನ್ನು ನೀಡಿದೆ. ಸಿಎಂ ಪತ್ನಿಯ ಈ ನಿರ್ಧಾರಕ್ಕೆ ವಿರೋಧ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ದ್ವೇಷ ರಾಜಕಾರಣದಿಂದ ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ನಾಯಕ ಆರೋಪಿಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಹಿಂತಿರುಗಿಸಲು ಮುಖ್ಯವಾಗಿ ಮನಸ್ಸು ಮಾಡಲು ಜಾರಿ ನಿರ್ದೇಶಾಲಯದ 2003ರ ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ದಾಖಲಿಸಿರುವ ಪ್ರಕರಣವೇ ಕಾರಣ ಎನ್ನಲಾಗಿದೆ.
ಈ ಸೆಕ್ಷನ್ ಅಡಿಯಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದ್ದು, ಯಾವುದೇ ನ್ಯಾಯಾಲಯದ ಆದೇಶ ಪಡೆಯಬೇಕು ಎಂಬ ನಿಯಮವಿಲ್ಲ. ಜೊತೆಗೆ ಇದರಲ್ಲಿ ಸಂಬಂಧಪಟ್ಟ ಆಸ್ತಿಗಾಗಿ ಹಣಕಾಸು ಅಕ್ರಮ ವರ್ಗಾವಣೆ ನಡೆದಿದೆ ಎಂದು ತನಿಖಾಧಿಕಾರಿಗಳಿಗೆ ಅನಿಸಿದರೆ ಮಾತ್ರ ಆ ಅಧಿಕಾರಿಗಳು 180 ದಿನಗಳವರೆಗೂ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…