Mallige murder case
ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari) ಮಾಹಿತಿ ನೀಡಿದ್ದಾರೆ.
ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುರೇಶ್ ಪರ ವಕೀಲ ಪಾಂಡು ಪೂಜಾರಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಪ್ಪುಗಳು ಸಾಕಷ್ಟು ಕಂಡು ಬಂದಿದೆ.
ಜಾರ್ಜ್ಶೀಟ್ನಲ್ಲಿ ಪೊಲೀಸರು ಸುಳ್ಳು ಕಥೆ ಕಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಪೊಲೀಸರಿಗೆ ಛೀಮಾರಿ ಹಾಕಿದೆ. ಅಲ್ಲದೆ ಇದೇ ತಿಂಗಳ 23ಕ್ಕೆ ತೀರ್ಪು ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಮೂವರು ತನಿಖಾಧಿಕಾರಿಗಳು ಸೇರಿದಂತೆ 10 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕೋರ್ಟ್ ಕ್ರಮ ತೆಗೆದುಕೊಳ್ಳುವ ವಿಶ್ವಾಸವಿದೆ. ಐಪಿಸಿ ಸೆಕ್ಷನ್ 211 ಅಡಿಯಲ್ಲಿ ಪ್ರಕರಣ ದಾಖಲಿಸಿ ಎಂದು ಮನವಿ ಮಾಡಿದ್ದೇನೆ. ನ್ಯಾಯಾಂಗ ತನಿಖೆಗೂ ಕೂಡ ನಾನು ಮನವಿ ಮಾಡುತ್ತೇನೆ ಎಂದು ಪ್ರಕರಣ ಸಂಬಂಧ ಮಾಹಿತಿ ನೀಡಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…