ಮೈಸೂರು ನಗರ

ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದ ವಕೀಲ ಪಾಂಡು ಪೂಜಾರಿ

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುರೇಶ್ ಪರ ವಕೀಲ ಪಾಂಡು ಪೂಜಾರಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಪ್ಪುಗಳು ಸಾಕಷ್ಟು ಕಂಡು ಬಂದಿದೆ.

ಜಾರ್ಜ್‌ಶೀಟ್‌ನಲ್ಲಿ ಪೊಲೀಸರು ಸುಳ್ಳು ಕಥೆ ಕಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಪೊಲೀಸರಿಗೆ ಛೀಮಾರಿ ಹಾಕಿದೆ. ಅಲ್ಲದೆ ಇದೇ ತಿಂಗಳ 23ಕ್ಕೆ ತೀರ್ಪು ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಮೂವರು ತನಿಖಾಧಿಕಾರಿಗಳು ಸೇರಿದಂತೆ 10 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕೋರ್ಟ್ ಕ್ರಮ ತೆಗೆದುಕೊಳ್ಳುವ ವಿಶ್ವಾಸವಿದೆ. ಐಪಿಸಿ ಸೆಕ್ಷನ್ 211 ಅಡಿಯಲ್ಲಿ ಪ್ರಕರಣ ದಾಖಲಿಸಿ ಎಂದು ಮನವಿ ಮಾಡಿದ್ದೇನೆ. ನ್ಯಾಯಾಂಗ ತನಿಖೆಗೂ ಕೂಡ ನಾನು ಮನವಿ ಮಾಡುತ್ತೇನೆ ಎಂದು ಪ್ರಕರಣ ಸಂಬಂಧ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

28 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago