ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ.
ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜು ಎಂಬುವವರೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ.
ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದರು. ಪತ್ನಿ ಜಯಪ್ರದ ಇನ್ಫೋಸಿಸ್ನಲ್ಲಿ ಕೆಲಸ ಮಾಡಿಕೊಂಡಿದ್ದರು.
ಇದ್ದಕ್ಕಿದ್ದಂತೆ ರಾಜು ಸೆಲ್ಪೀ ವಿಡಿಯೋ ಮಾಡಿ ವಿಷ ಕುಡಿದು ನರಳಾಡುತ್ತಿದ್ದರು. ಈ ವೇಳೆ ರಾಜು ಅವರನ್ನು ಪರಿಚಯಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಸಾವನ್ನಪ್ಪಿದ್ದಾರೆ.
ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು. ನನ್ನ ಸಾವಿಗೆ ಅವರೇ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಯಪ್ರದಾ ಅವರು, ಪತಿಯ ಸಾವಿನ ಬಗ್ಗೆ ಅನುಮಾನವಿದೆ. ಹಾಗಾಗಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…