ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್:
ಕೃಷಿ ಮತ್ತು ಕೃಷಿ ಪೂರಕ ಕ್ಷೇತ್ರಕ್ಕೆ ಈ ಬಜೆಟ್ನಲ್ಲಿ ಕೇವಲ ಶೇ.೧೪ರಷ್ಟು ಭಾಗ ಮಾತ್ರ ಮೀಸಲಿಟ್ಟು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸಿಲ್ಲ. ವಿದ್ಯುತ್ ಖಾಸಗೀಕರಣದ ವಿರುದ್ಧ ಚಕಾರ ಎತ್ತಿಲ್ಲ. ಹೀಗಾಗಿ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣಲಿದೆ.
-ಬಡಗಲಪುರ ನಾಗೇಂದ್ರ, ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ.
ಮೈಸೂರಿನ ಜನತೆಗೆ ಮಕ್ಮಲ್ ಟೋಫಿ:
ರಾಜ್ಯದ ಹಿತ ಕಾಯುವ ಬಜೆಟ್ ಅಲ್ಲ. ಒಂದು ಸಮುದಾಯ ಒಲೈಕೆಗಾಗಿ ಮಾಡಿರುವ ಬಜೆಟ್ ಇದಾಗಿದೆ. ಬೃಹತ್ ಮಹಾನಗರಪಾಲಿಕೆ ಹಣ ಬಜೆಟ್ ಇಲ್ಲ. ಪಾರಂಪರಿಕ ಕಟ್ಟಡ ನಿರ್ವಹಣೆಗೆ ಹಣ ಇಲ್ಲ. ಪ್ರವಾಸೋದ್ಯಮಕ್ಕೆ ಒತ್ತು ನೀಡಿಲ್ಲ. ತಮ್ಮ ಸ್ವ ಕ್ಷೇತ್ರಕ್ಕಾಗಿ ಫಿಲ್ಮ್ ಸಿಟಿ ನಿರ್ಮಿಸಲು ಹೊರಟ್ಟಿದ್ದಾರೆ. ಒಟ್ಟಾರೆ ಈ ಬಜೆಟ್ ಮೈಸೂರಿನ ಜನತೆಗೆ ಮಕ್ಮಲ್ ಟೋಫಿ ಹಾಕಿದ್ದಾರೆ.
– ಎಲ್.ನಾಗೇಂದ್ರ, ಮಾಜಿ ಶಾಸಕ.
ಈ ಬಾರಿಯ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದು ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ. ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿದ್ದಾರೆ. ಎಸ್ಸಿ, ಎಸ್ಟಿ, ಓಬಿಸಿ ಸಮುದಾಯಗಳಿಗೆ ಚಿಪ್ಪು ಕೊಟ್ಟಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ.
-ಎಲ್.ಆರ್.ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ.
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು…