ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್:
ಕೃಷಿ ಮತ್ತು ಕೃಷಿ ಪೂರಕ ಕ್ಷೇತ್ರಕ್ಕೆ ಈ ಬಜೆಟ್ನಲ್ಲಿ ಕೇವಲ ಶೇ.೧೪ರಷ್ಟು ಭಾಗ ಮಾತ್ರ ಮೀಸಲಿಟ್ಟು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸಿಲ್ಲ. ವಿದ್ಯುತ್ ಖಾಸಗೀಕರಣದ ವಿರುದ್ಧ ಚಕಾರ ಎತ್ತಿಲ್ಲ. ಹೀಗಾಗಿ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣಲಿದೆ.
-ಬಡಗಲಪುರ ನಾಗೇಂದ್ರ, ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ.
ಮೈಸೂರಿನ ಜನತೆಗೆ ಮಕ್ಮಲ್ ಟೋಫಿ:
ರಾಜ್ಯದ ಹಿತ ಕಾಯುವ ಬಜೆಟ್ ಅಲ್ಲ. ಒಂದು ಸಮುದಾಯ ಒಲೈಕೆಗಾಗಿ ಮಾಡಿರುವ ಬಜೆಟ್ ಇದಾಗಿದೆ. ಬೃಹತ್ ಮಹಾನಗರಪಾಲಿಕೆ ಹಣ ಬಜೆಟ್ ಇಲ್ಲ. ಪಾರಂಪರಿಕ ಕಟ್ಟಡ ನಿರ್ವಹಣೆಗೆ ಹಣ ಇಲ್ಲ. ಪ್ರವಾಸೋದ್ಯಮಕ್ಕೆ ಒತ್ತು ನೀಡಿಲ್ಲ. ತಮ್ಮ ಸ್ವ ಕ್ಷೇತ್ರಕ್ಕಾಗಿ ಫಿಲ್ಮ್ ಸಿಟಿ ನಿರ್ಮಿಸಲು ಹೊರಟ್ಟಿದ್ದಾರೆ. ಒಟ್ಟಾರೆ ಈ ಬಜೆಟ್ ಮೈಸೂರಿನ ಜನತೆಗೆ ಮಕ್ಮಲ್ ಟೋಫಿ ಹಾಕಿದ್ದಾರೆ.
– ಎಲ್.ನಾಗೇಂದ್ರ, ಮಾಜಿ ಶಾಸಕ.
ಈ ಬಾರಿಯ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದು ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ. ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿದ್ದಾರೆ. ಎಸ್ಸಿ, ಎಸ್ಟಿ, ಓಬಿಸಿ ಸಮುದಾಯಗಳಿಗೆ ಚಿಪ್ಪು ಕೊಟ್ಟಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ.
-ಎಲ್.ಆರ್.ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ.
ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…
ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ…
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…