ಮೈಸೂರು ನಗರ

ರಾಜ್ಯ ಬಜೆಟ್‌ ಬಗ್ಗೆ ಹಲವರ ವಿರೋಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್‌:

ಕೃಷಿ ಮತ್ತು ಕೃಷಿ ಪೂರಕ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ ಕೇವಲ ಶೇ.೧೪ರಷ್ಟು ಭಾಗ ಮಾತ್ರ ಮೀಸಲಿಟ್ಟು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸಿಲ್ಲ. ವಿದ್ಯುತ್ ಖಾಸಗೀಕರಣದ ವಿರುದ್ಧ ಚಕಾರ ಎತ್ತಿಲ್ಲ. ಹೀಗಾಗಿ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣಲಿದೆ.

                                                 -ಬಡಗಲಪುರ ನಾಗೇಂದ್ರ, ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ.

ಮೈಸೂರಿನ ಜನತೆಗೆ ಮಕ್ಮಲ್ ಟೋಫಿ:

ರಾಜ್ಯದ ಹಿತ ಕಾಯುವ ಬಜೆಟ್ ಅಲ್ಲ. ಒಂದು ಸಮುದಾಯ ಒಲೈಕೆಗಾಗಿ ಮಾಡಿರುವ ಬಜೆಟ್ ಇದಾಗಿದೆ. ಬೃಹತ್ ಮಹಾನಗರಪಾಲಿಕೆ ಹಣ ಬಜೆಟ್ ಇಲ್ಲ. ಪಾರಂಪರಿಕ ಕಟ್ಟಡ ನಿರ್ವಹಣೆಗೆ ಹಣ ಇಲ್ಲ. ಪ್ರವಾಸೋದ್ಯಮಕ್ಕೆ ಒತ್ತು ನೀಡಿಲ್ಲ. ತಮ್ಮ ಸ್ವ ಕ್ಷೇತ್ರಕ್ಕಾಗಿ ಫಿಲ್ಮ್ ಸಿಟಿ ನಿರ್ಮಿಸಲು ಹೊರಟ್ಟಿದ್ದಾರೆ. ಒಟ್ಟಾರೆ ಈ ಬಜೆಟ್ ಮೈಸೂರಿನ ಜನತೆಗೆ ಮಕ್ಮಲ್ ಟೋಫಿ ಹಾಕಿದ್ದಾರೆ.

                                                                                                            – ಎಲ್.ನಾಗೇಂದ್ರ, ಮಾಜಿ ಶಾಸಕ.

ಈ ಬಾರಿಯ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದು ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ. ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿದ್ದಾರೆ. ಎಸ್‌ಸಿ, ಎಸ್‌ಟಿ, ಓಬಿಸಿ ಸಮುದಾಯಗಳಿಗೆ ಚಿಪ್ಪು ಕೊಟ್ಟಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್‌ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ.

                                                                                  -ಎಲ್.ಆರ್.ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ. 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago