Mysore
15
scattered clouds

Social Media

ಬುಧವಾರ, 21 ಜನವರಿ 2026
Light
Dark

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ: ಸಚಿವ ಎಚ್.ಸಿ.ಮಹದೇವಪ್ಪ ರಿಯಾಕ್ಷನ್‌

ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ನಿನ್ನೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮರೀಗೌಡ ಅವರಿಗೆ ರಾಜಕಾರಣಿಗಳ ಒತ್ತಡ ಇರಲಿಲ್ಲ. ಆದರೆ ರಕ್ತದ ಒತ್ತಡ ಹೆಚ್ಚಿದ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಮರಿಗೌಡಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ರಾಜೀನಾಮೆ ಕೊಟ್ಟಿದ್ದಾರೆ. ಯಾವ ರಾಜಕಾರಣಿಗಳು ಕೂಡ ರಾಜೀನಾಮೆ ಕೊಡು ಎಂದು ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

Tags:
error: Content is protected !!