ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ನಿನ್ನೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮರೀಗೌಡ ಅವರಿಗೆ ರಾಜಕಾರಣಿಗಳ ಒತ್ತಡ ಇರಲಿಲ್ಲ. ಆದರೆ ರಕ್ತದ ಒತ್ತಡ ಹೆಚ್ಚಿದ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಮರಿಗೌಡಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ರಾಜೀನಾಮೆ ಕೊಟ್ಟಿದ್ದಾರೆ. ಯಾವ ರಾಜಕಾರಣಿಗಳು ಕೂಡ ರಾಜೀನಾಮೆ ಕೊಡು ಎಂದು ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…