tanveer seet (1)
ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್ಐಟಿ ತನಿಖೆ ಮಾಡಿ ಸತ್ಯ ಹೊರ ತರುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ ಎಸ್ಐಟಿ ಸ್ವಾಗತ ಮಾಡಿದವರು ತನಿಖೆಗೆ ಮುಕ್ತ ಅವಕಾಶ ನೀಡದೆ ಮಧ್ಯ ಪ್ರವೇಶ ಮಾಡಿ ಜನರ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಭಕ್ತರ ಭಾವನೆಯಂತೆ ಮಂಜುನಾಥನ ದರ್ಶನಕ್ಕೆ ಹೊರಟಿದ್ದಾರೆ. ಇದಕ್ಕೆ ಕಾಂಗ್ರೆಸ್ ಎನ್ನಬೇಡಿ, ಜನರ ಯಾತ್ರೆ.. ಪಕ್ಷದ ವತಿಯಿಂದ ಇಲ್ಲಿ ಯಾತ್ರೆ ಕೈಗೊಂಡಿಲ್ಲ ಎಂದರು.
ಇದನ್ನು ಓದಿ: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ
ಇನ್ನು ಮೊದಲು ಮುಸುಕುಧಾರಿಗೆ ಮಂಪರು ಪರೀಕ್ಷೆ ಆಗಬೇಕು. ಕನಿಷ್ಟ ಎಸ್ಐಟಿ ಮಧ್ಯಂತರ ವರದಿಯಾದರೂ ಹೊರ ಬರಬೇಕು. ಗೊಂದಲಗಳುಗೆ ತೆರೆ ಎಳೆಯಬೇಕು ಎಂದು ಗೃಹಸಚಿವರಿಗೆ ಕೇಳಿದ್ದೇನೆ ಎಂದು ಹೇಳಿದರು.
ಇನ್ನು ಷಡ್ಯಂತ್ರಕ್ಕೆ ವಿದೇಶಿ ಹಣ ಹರಿದು ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದಕ್ಕೆ ನಾನು ಉತ್ತರ ಕೊಡಲ್ಲ. ಯಾವುದೇ ವಿದೇಶಿ ಹಣ ಬರಬೇಕು ಅಂದರೆ ಕೇಂದ್ರದ ಮೂಲಕವೇ ಬರಬೇಕು. ತನಿಖೆ ವೇಳೆ ಇದೂ ಕೂಡ ತನಿಖೆ ಆಗಲಿ. ವಿರೋಧ ಪಕ್ಷದವರು ಬಟ್ಟೆ ಬದಲಿಸಿದಂತೆ ಹೆಳಿಕೆ ನೀಡಿದರೆ ಮಾಡಲು ಸಾಧ್ಯ ಇಲ್ಲ.
ಮೊದಲು ಎಸ್ಐಟಿ ತನಿಖೆ ವರದಿ ಬರಲಿ. ಮುಂದೆ ನೋಡೋಣ. ಮುಸುಕುದಾರಿ ಹಿನ್ನೆಲೆಯ ಬಗ್ಗೆ ತನಿಖೆ ಆಗಬೇಕು. ಆತ ಹೇಳಿರುವ ಹೆಸರುಗಳ ಬಗ್ಗೆ ಕೂಡ ತನಿಖೆ ಆಗಬೇಕು.
ಇದು ಯಾವುದೇ ರಾಜಕೀಯ ಯಾತ್ರೆಯಲ್ಲ, ಭಕ್ತರ ಯಾತ್ರೆಯಾಗಿದೆ ಎಂದು ಧರ್ಮಸ್ಥಳ ಯಾತ್ರೆ ಬಗ್ಗೆ ಮಾಹಿತಿ ನೀಡಿದರು.
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…