ಮೈಸೂರು ನಗರ

ಮೊದಲು ಮುಸುಕುಧಾರಿಗೆ ಮಂಪರು ಪರೀಕ್ಷೆ ಆಗಬೇಕು: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ ಮಾಡಿ ಸತ್ಯ ಹೊರ ತರುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ ಎಸ್‌ಐಟಿ ಸ್ವಾಗತ ಮಾಡಿದವರು ತನಿಖೆಗೆ ಮುಕ್ತ ಅವಕಾಶ ನೀಡದೆ ಮಧ್ಯ ಪ್ರವೇಶ ಮಾಡಿ ಜನರ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಭಕ್ತರ ಭಾವನೆಯಂತೆ ಮಂಜುನಾಥನ ದರ್ಶನಕ್ಕೆ ಹೊರಟಿದ್ದಾರೆ. ಇದಕ್ಕೆ ಕಾಂಗ್ರೆಸ್ ಎನ್ನಬೇಡಿ, ಜನರ ಯಾತ್ರೆ.. ಪಕ್ಷದ ವತಿಯಿಂದ ಇಲ್ಲಿ ಯಾತ್ರೆ ಕೈಗೊಂಡಿಲ್ಲ ಎಂದರು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಇನ್ನು ಮೊದಲು ಮುಸುಕುಧಾರಿಗೆ ಮಂಪರು ಪರೀಕ್ಷೆ ಆಗಬೇಕು. ಕನಿಷ್ಟ ಎಸ್‌ಐಟಿ ಮಧ್ಯಂತರ ವರದಿಯಾದರೂ ಹೊರ ಬರಬೇಕು. ಗೊಂದಲಗಳುಗೆ ತೆರೆ ಎಳೆಯಬೇಕು ಎಂದು ಗೃಹಸಚಿವರಿಗೆ ಕೇಳಿದ್ದೇನೆ ಎಂದು ಹೇಳಿದರು.

ಇನ್ನು ಷಡ್ಯಂತ್ರಕ್ಕೆ ವಿದೇಶಿ ಹಣ ಹರಿದು ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದಕ್ಕೆ ನಾನು ಉತ್ತರ ಕೊಡಲ್ಲ. ಯಾವುದೇ ವಿದೇಶಿ ಹಣ ಬರಬೇಕು ಅಂದರೆ ಕೇಂದ್ರದ ಮೂಲಕವೇ ಬರಬೇಕು. ತನಿಖೆ ವೇಳೆ ಇದೂ ಕೂಡ ತನಿಖೆ ಆಗಲಿ. ವಿರೋಧ ಪಕ್ಷದವರು ಬಟ್ಟೆ ಬದಲಿಸಿದಂತೆ ಹೆಳಿಕೆ ನೀಡಿದರೆ ಮಾಡಲು ಸಾಧ್ಯ ಇಲ್ಲ.
ಮೊದಲು ಎಸ್‌ಐಟಿ ತನಿಖೆ ವರದಿ ಬರಲಿ. ಮುಂದೆ ನೋಡೋಣ. ಮುಸುಕುದಾರಿ ಹಿನ್ನೆಲೆಯ ಬಗ್ಗೆ ತನಿಖೆ ಆಗಬೇಕು. ಆತ ಹೇಳಿರುವ ಹೆಸರುಗಳ ಬಗ್ಗೆ ಕೂಡ ತನಿಖೆ ಆಗಬೇಕು.
ಇದು ಯಾವುದೇ ರಾಜಕೀಯ ಯಾತ್ರೆಯಲ್ಲ, ಭಕ್ತರ ಯಾತ್ರೆಯಾಗಿದೆ ಎಂದು ಧರ್ಮಸ್ಥಳ ಯಾತ್ರೆ ಬಗ್ಗೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago