ಮೈಸೂರು ನಗರ

ಮೈಸೂರು| ಅಪ್ಪು ಹೆಸರಿನಲ್ಲಿ ಸಾಮೂಹಿಕ ವಿವಾಹ: ನವ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಚಿತ್ರರಂಗದ ಮರೆಯಲಾಗದ ನಟ ದಿವಂಗತ ಪುನೀತ್‌ ರಾಜ್‌ ಕುಮಾರ್‌ ಹೆಸರಿನಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅಪ್ಪು ಹೆಸರಿನಲ್ಲಿ ಎಂಟು ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟರು.

ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ ಗೌಡ ಅವರು ಚಾಲನೆ ನೀಡಿದರು. 11.45ರ ಶುಭ ಮುಹೂರ್ತದಲ್ಲಿ ಅಪ್ಪು ಭಾವಚಿತ್ರದ ಮುಂದೆ ಎಂಟು ಜೋಡಿಗಳು ನವ ಜೀವನಕ್ಕೆ ಕಾಲಿಟ್ಟರು. ಪುನೀತ್ ರಾಜ್‍ಕುಮಾರ್ ಸಮಾಜ ಸೇವಾ ಸಮಿತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹಯಲ್ಲಿ ಸಮಿತಿ ವತಿಯಿಂದಲೇ ವಧು ವರರಿಗೆ ತಾಳಿ, ಸೀರೆ, ಪಂಚೆ, ಕಾಲುಂಗುರ ವಿತರಣೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ನಟ ವಿನಯ್‌ ರಾಜ್‌ ಕುಮಾರ್‌, ರಾಜ್‌ ಕುಮಾರ್‌ ಪುತ್ರಿ ಲಕ್ಷ್ಮೀ ಅವರ ಮಗ ಷಣ್ಮುಖ ಭಾಗಿಯಾಗಿ ನವ ದಂಪತಿಗಳಿಗೆ ಶುಭ ಹಾರೈಸಿದರು.

ನವ ಜೀವನಕ್ಕೆ ಕಾಲಿಟ್ಟ ಜೋಡಿಗಳು ಮಾತನಾಡಿ, ನಮಗೆಲ್ಲಾ ಅಪ್ಪು ದಂಪತಿಯಂತೆ ಬದುಕಬೇಕು ಎನ್ನುವ ಆಸೆಯಿದೆ. ಅಪ್ಪು ಅವರು ನಮಗೆ ಆದರ್ಶದ ವ್ಯಕ್ತಿ. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಜೀವನ ಮಾಡುತ್ತೇವೆ. ಅವರು ಇಲ್ಲದಿದ್ದರೂ ಅವರ ಆಶೀರ್ವಾದ ನಮಗೆ ಇದೆ ಎಂದು ಭಾವಿಸುತ್ತೇವೆ. ಅವರಂತೆ ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

4 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

8 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

24 hours ago