ಮೈಸೂರು: ನಾಡದೇವತೆ ಚಾಮುಂಡೇಶ್ವರಿ ರಥೋತ್ಸವವು ದಸರಾದ ಒಂದು ಭಾಗವೇ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ರಥೋತ್ಸವದ ಸಂಭ್ರಮ ಮನೆಮಾಡಿದೆ.
ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ: ಮೂಲವಿಗ್ರಹಕ್ಕೆ ಸಿಂಹವಾಹಿನಿ ಅಲಂಕಾರ
ರಥೋತ್ಸವ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ದಸರಾ ಹಾಗೂ ಚಾಮುಂಡೇಶ್ವರಿ ರಥೋತ್ಸವ ಸುಸೂತ್ರವಾಗಿ ನಡೆದಿದೆ. ತಾಯಿ ಚಾಮುಂಡೇಶ್ವರಿ ದೇಶದ ಜನತೆಗೆ ಒಳಿತು ಮಾಡಲಿ. ರಥೋತ್ಸವವೂ ದಸರಾದ ಒಂದು ಭಾಗವೇ. ಇದು ಕೂಡ ಅತ್ಯಂತ ಸಡಗರದಿಂದ ಜರುಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಇದೇ ವೇಳೆ ಮಾತನಾಡಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪದ್ದತಿಯಂತೆ ಇಂದು ಅಮ್ಮನವರ ರಥೋತ್ಸವ ಜರುಗಿದೆ. ಸರಿಯಾದ ರೀತಿಯಲ್ಲಿ ಸಮಯಕ್ಕೆ ತಕ್ಕಂತೆ ಎಲ್ಲಾ ವಿಧಿ ವಿಧಾನಗಳು ಜರುಗಿವೆ. ನಾಡಿನ ಸಮಸ್ತ ಜನತೆ ಆರೋಗ್ಯ, ಸಮೃದ್ಧಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಹೇಳಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…