ಮೈಸೂರು ನಗರ

ಎಲ್ಲರ ಮೇಲೂ ಚಾಮುಂಡೇಶ್ವರಿ ಕೃಪೆ ಇರಲಿ: ಪ್ರಮೋದಾದೇವಿ ಒಡೆಯರ್‌

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ರಥೋತ್ಸವವು ದಸರಾದ ಒಂದು ಭಾಗವೇ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ರಥೋತ್ಸವದ ಸಂಭ್ರಮ ಮನೆಮಾಡಿದೆ.

ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ: ಮೂಲವಿಗ್ರಹಕ್ಕೆ ಸಿಂಹವಾಹಿನಿ ಅಲಂಕಾರ

ರಥೋತ್ಸವ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ದಸರಾ ಹಾಗೂ ಚಾಮುಂಡೇಶ್ವರಿ ರಥೋತ್ಸವ ಸುಸೂತ್ರವಾಗಿ ನಡೆದಿದೆ. ತಾಯಿ ಚಾಮುಂಡೇಶ್ವರಿ ದೇಶದ ಜನತೆಗೆ ಒಳಿತು ಮಾಡಲಿ. ರಥೋತ್ಸವವೂ ದಸರಾದ ಒಂದು ಭಾಗವೇ. ಇದು ಕೂಡ ಅತ್ಯಂತ ಸಡಗರದಿಂದ ಜರುಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪದ್ದತಿಯಂತೆ ಇಂದು ಅಮ್ಮನವರ ರಥೋತ್ಸವ ಜರುಗಿದೆ. ಸರಿಯಾದ ರೀತಿಯಲ್ಲಿ ಸಮಯಕ್ಕೆ ತಕ್ಕಂತೆ ಎಲ್ಲಾ ವಿಧಿ ವಿಧಾನಗಳು ಜರುಗಿವೆ. ನಾಡಿನ ಸಮಸ್ತ ಜನತೆ ಆರೋಗ್ಯ, ಸಮೃದ್ಧಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

52 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

56 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago