ಮೈಸೂರು ನಗರ

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ : ಸಚಿವ ಎಂಬಿ ಪಾಟೀಲ್‌

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು(ಜನವರಿ.17) ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ವೀರಶೈವ ಲಿಂಗಾಯತ ಬಿಸಿನೆಸ್‌ ಕಾಂಕ್ಲೇವ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಲಿಂಗಾಯತ, ಒಕ್ಕಲಿಗ ಉಪ ಪಂಗಡಗಳನ್ನು ಅದೇ ಜಾತಿಯ ಅಡಿಯಲ್ಲಿ ಪರಿಗಣಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಅದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅದನ್ನು ತೆರೆದ ನಂತರವೇ ಅದರ ಸಾಧಕ-ಬಾಧಕಗಳು ತಿಳಿಯುವುದು. ಅದಕ್ಕೂ ಮುನ್ನ ಜಾತಿಗಣತಿ ವರದಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಲಿಂಗಾಯ ಉಪ್ಪಾರ, ಕುರುಬ, ಕುಂಬಾರ, ಹಡಪದ, ಗಾಣಿಗ ಸೇರಿದಂತೆ ಮುಂತಾದ ಉಪ ಪಂಗಡಗಳು ಲಿಂಗಾಯತ ಬದಲು ಹಿಂದೂ ಎಂದೇ ಬರೆಸಿವೆ. ಅಲ್ಲದೇ 2ಎ ಮೀಸಲಾತಿಗಾಗಿ ಗಾಣಿಗ ಲಿಂಗಾಯತರೂ ಹಿಂದೂ ಗಾಣಿಗ ಎಂದೂ 3ಎ ಮೀಸಲಾತಿಗೆ ರೆಡ್ಡಿ ಲಿಂಗಾಯತರು ಹಿಂದೂ ರೆಡ್ಡಿ ಎಂದೇ ದಾಖಲಿಸಿಕೊಂಡಿದ್ದಾರೆ. ಆದರೆ ಅದನ್ನು ನಾನು ತಪ್ಪು ಎಂದೂ ಹೇಳಲಾರೆ. ಏಕೆಂದರೆ ಅವರಿಗೆ ಬೇಕಿರುವುದು ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಅಷ್ಟೇ ಎಂದು ಹೇಳಿದರು.

ಲಿಂಗಾಯತ ಸಮುದಾಯ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿದ್ದರೆ ಈ ಎಲ್ಲ ಉಪ ಪಂಗಡಗಳಿಗೂ ನ್ಯಾಯ ದೊರೆಯುತ್ತಿತ್ತು. ಆದರೆ ಸ್ವತಂತ್ರ ಧರ್ಮ ಹೋರಾಟವನ್ನು ವಿರೋಧಿಸಿದವರಿಗೆ ಇಂದು ಅದೆಲ್ಲಾ ಅರ್ಥವಾಗುತ್ತದೆ. ಇದನ್ನೇ ನಾನು ವೀರಶೈವ ಮಹಾ ಅಧೀವೇಶನದಲ್ಲಿ ಕಾಶಿ ಸ್ವಾಮೀಜಿ ಅವರಿಗೂ ಹೇಳಿದ್ದೇನೆ. ಸಮಾಜದಲ್ಲಿ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿದ್ದರೆ ಮಾತ್ರ ರಾಜಕೀಯ ಶಕ್ತಿಯಾಗಿ ಉಳಿಯುತ್ತದೆ. ಇಲ್ಲವಾದರೆ ನಿರಾಶರಾಗಿ ಹೋಗುತ್ತವೆ ಎಂದು ತಿಳಿಸಿದರು.

ನಾನು ಸಿಎಂ ಕುರ್ಚಿಗೆ ಟಿಕೆಟ್‌ ಆಕಾಂಕ್ಷಿಯಲ್ಲ

ನಗರದಲ್ಲಿ ಇಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಅಲ್ಲದೇ ನಾನು ಆ ಸ್ಥಾನಕ್ಕೆ ಆಕಾಂಕ್ಷಿಯೂ ಅಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

1 hour ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

1 hour ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago