ಮೈಸೂರು ನಗರ

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ : ಸಚಿವ ಎಂಬಿ ಪಾಟೀಲ್‌

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು(ಜನವರಿ.17) ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ವೀರಶೈವ ಲಿಂಗಾಯತ ಬಿಸಿನೆಸ್‌ ಕಾಂಕ್ಲೇವ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಲಿಂಗಾಯತ, ಒಕ್ಕಲಿಗ ಉಪ ಪಂಗಡಗಳನ್ನು ಅದೇ ಜಾತಿಯ ಅಡಿಯಲ್ಲಿ ಪರಿಗಣಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಅದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅದನ್ನು ತೆರೆದ ನಂತರವೇ ಅದರ ಸಾಧಕ-ಬಾಧಕಗಳು ತಿಳಿಯುವುದು. ಅದಕ್ಕೂ ಮುನ್ನ ಜಾತಿಗಣತಿ ವರದಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಲಿಂಗಾಯ ಉಪ್ಪಾರ, ಕುರುಬ, ಕುಂಬಾರ, ಹಡಪದ, ಗಾಣಿಗ ಸೇರಿದಂತೆ ಮುಂತಾದ ಉಪ ಪಂಗಡಗಳು ಲಿಂಗಾಯತ ಬದಲು ಹಿಂದೂ ಎಂದೇ ಬರೆಸಿವೆ. ಅಲ್ಲದೇ 2ಎ ಮೀಸಲಾತಿಗಾಗಿ ಗಾಣಿಗ ಲಿಂಗಾಯತರೂ ಹಿಂದೂ ಗಾಣಿಗ ಎಂದೂ 3ಎ ಮೀಸಲಾತಿಗೆ ರೆಡ್ಡಿ ಲಿಂಗಾಯತರು ಹಿಂದೂ ರೆಡ್ಡಿ ಎಂದೇ ದಾಖಲಿಸಿಕೊಂಡಿದ್ದಾರೆ. ಆದರೆ ಅದನ್ನು ನಾನು ತಪ್ಪು ಎಂದೂ ಹೇಳಲಾರೆ. ಏಕೆಂದರೆ ಅವರಿಗೆ ಬೇಕಿರುವುದು ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಅಷ್ಟೇ ಎಂದು ಹೇಳಿದರು.

ಲಿಂಗಾಯತ ಸಮುದಾಯ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿದ್ದರೆ ಈ ಎಲ್ಲ ಉಪ ಪಂಗಡಗಳಿಗೂ ನ್ಯಾಯ ದೊರೆಯುತ್ತಿತ್ತು. ಆದರೆ ಸ್ವತಂತ್ರ ಧರ್ಮ ಹೋರಾಟವನ್ನು ವಿರೋಧಿಸಿದವರಿಗೆ ಇಂದು ಅದೆಲ್ಲಾ ಅರ್ಥವಾಗುತ್ತದೆ. ಇದನ್ನೇ ನಾನು ವೀರಶೈವ ಮಹಾ ಅಧೀವೇಶನದಲ್ಲಿ ಕಾಶಿ ಸ್ವಾಮೀಜಿ ಅವರಿಗೂ ಹೇಳಿದ್ದೇನೆ. ಸಮಾಜದಲ್ಲಿ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿದ್ದರೆ ಮಾತ್ರ ರಾಜಕೀಯ ಶಕ್ತಿಯಾಗಿ ಉಳಿಯುತ್ತದೆ. ಇಲ್ಲವಾದರೆ ನಿರಾಶರಾಗಿ ಹೋಗುತ್ತವೆ ಎಂದು ತಿಳಿಸಿದರು.

ನಾನು ಸಿಎಂ ಕುರ್ಚಿಗೆ ಟಿಕೆಟ್‌ ಆಕಾಂಕ್ಷಿಯಲ್ಲ

ನಗರದಲ್ಲಿ ಇಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಅಲ್ಲದೇ ನಾನು ಆ ಸ್ಥಾನಕ್ಕೆ ಆಕಾಂಕ್ಷಿಯೂ ಅಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

3 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

3 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

3 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

14 hours ago