ಮೈಸೂರು: ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದೆ ಎಂದು ಶಾಸಕ ಜಿ ಡಿ ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಎರಡು ದಿನಗಳಿರುವಾಗ ಮತದಾರರು ಮತದಾನ ಮಾಡುವ ಹಕ್ಕನ್ನು ಕಸಿಯುವ ಯತ್ನ ನಡೆದಿದೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸರ್ಕಾರ ಅಧಿಕಾರ ಬಳಸಿಕೊಂಡು ಒತ್ತಡ ಹೇರುವುದು ಸರಿಯಲ್ಲ. ಚುನಾವಣೆ ತಡೆಯುವ ವ್ಯವಸ್ಥಿತ ಹುನ್ನಾರ ನಡೆದಿದೆ. ಮತದಾರರ ಹಕ್ಕು ಕಸಿಯುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಇನ್ನು ಸಹಕಾರಿ ಕ್ಷೇತ್ರವನ್ನು ಉಳಿಸುವ ಸಲುವಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ರಾಜಕೀಯ ಕಾರಣಗಳಿಗೋಸ್ಕರ ಸಹಕಾರಿ ಕ್ಷೇತ್ರ ಹಾಳಾಗಬಾರದು. ನಾನು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಎರಡೂ ಜಿಲ್ಲೆಗಳ ರೈತರನ್ನು ಸಮಾನವಾಗಿ ಕಂಡಿದ್ದೇನೆ. ಎರಡೂ ಜಿಲ್ಲೆಗಳ ರೈತರಿಗೆ ಸಾಲ ನೀಡಿದ್ದೇನೆ.
ಆದರೆ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಸಮರ್ಪಕವಾಗಿ ಸಾಲ ನೀಡಿಲ್ಲ. ಇದನ್ನು ಸಹಕಾರಿ ಕ್ಷೇತ್ರದ ಮತದಾರರು ಗಮನಿಸುತ್ತಾರೆ.ಯಾವುದೇ ಆಸೆ ಆಮಿಷಗಳಿಗೆ ಮತದಾರರು ಮಣಿಯುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…