ಮೈಸೂರು: ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದೆ ಎಂದು ಶಾಸಕ ಜಿ ಡಿ ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಎರಡು ದಿನಗಳಿರುವಾಗ ಮತದಾರರು ಮತದಾನ ಮಾಡುವ ಹಕ್ಕನ್ನು ಕಸಿಯುವ ಯತ್ನ ನಡೆದಿದೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸರ್ಕಾರ ಅಧಿಕಾರ ಬಳಸಿಕೊಂಡು ಒತ್ತಡ ಹೇರುವುದು ಸರಿಯಲ್ಲ. ಚುನಾವಣೆ ತಡೆಯುವ ವ್ಯವಸ್ಥಿತ ಹುನ್ನಾರ ನಡೆದಿದೆ. ಮತದಾರರ ಹಕ್ಕು ಕಸಿಯುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಇನ್ನು ಸಹಕಾರಿ ಕ್ಷೇತ್ರವನ್ನು ಉಳಿಸುವ ಸಲುವಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ರಾಜಕೀಯ ಕಾರಣಗಳಿಗೋಸ್ಕರ ಸಹಕಾರಿ ಕ್ಷೇತ್ರ ಹಾಳಾಗಬಾರದು. ನಾನು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಎರಡೂ ಜಿಲ್ಲೆಗಳ ರೈತರನ್ನು ಸಮಾನವಾಗಿ ಕಂಡಿದ್ದೇನೆ. ಎರಡೂ ಜಿಲ್ಲೆಗಳ ರೈತರಿಗೆ ಸಾಲ ನೀಡಿದ್ದೇನೆ.
ಆದರೆ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಸಮರ್ಪಕವಾಗಿ ಸಾಲ ನೀಡಿಲ್ಲ. ಇದನ್ನು ಸಹಕಾರಿ ಕ್ಷೇತ್ರದ ಮತದಾರರು ಗಮನಿಸುತ್ತಾರೆ.ಯಾವುದೇ ಆಸೆ ಆಮಿಷಗಳಿಗೆ ಮತದಾರರು ಮಣಿಯುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…