ಮೈಸೂರು: ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದೆ ಎಂದು ಶಾಸಕ ಜಿ ಡಿ ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಎರಡು ದಿನಗಳಿರುವಾಗ ಮತದಾರರು ಮತದಾನ ಮಾಡುವ ಹಕ್ಕನ್ನು ಕಸಿಯುವ ಯತ್ನ ನಡೆದಿದೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸರ್ಕಾರ ಅಧಿಕಾರ ಬಳಸಿಕೊಂಡು ಒತ್ತಡ ಹೇರುವುದು ಸರಿಯಲ್ಲ. ಚುನಾವಣೆ ತಡೆಯುವ ವ್ಯವಸ್ಥಿತ ಹುನ್ನಾರ ನಡೆದಿದೆ. ಮತದಾರರ ಹಕ್ಕು ಕಸಿಯುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಇನ್ನು ಸಹಕಾರಿ ಕ್ಷೇತ್ರವನ್ನು ಉಳಿಸುವ ಸಲುವಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ರಾಜಕೀಯ ಕಾರಣಗಳಿಗೋಸ್ಕರ ಸಹಕಾರಿ ಕ್ಷೇತ್ರ ಹಾಳಾಗಬಾರದು. ನಾನು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಎರಡೂ ಜಿಲ್ಲೆಗಳ ರೈತರನ್ನು ಸಮಾನವಾಗಿ ಕಂಡಿದ್ದೇನೆ. ಎರಡೂ ಜಿಲ್ಲೆಗಳ ರೈತರಿಗೆ ಸಾಲ ನೀಡಿದ್ದೇನೆ.
ಆದರೆ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಸಮರ್ಪಕವಾಗಿ ಸಾಲ ನೀಡಿಲ್ಲ. ಇದನ್ನು ಸಹಕಾರಿ ಕ್ಷೇತ್ರದ ಮತದಾರರು ಗಮನಿಸುತ್ತಾರೆ.ಯಾವುದೇ ಆಸೆ ಆಮಿಷಗಳಿಗೆ ಮತದಾರರು ಮಣಿಯುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…