ಮೈಸೂರು ನಗರ

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ ಒತ್ತು ನೀಡಿದೆ.

ಒಟ್ಟು 799.90 ಕೋಟಿ ರೂಪಾಯಿ ಸಂಪನ್ಮೂಲಗಳನ್ನು ಸಂಗ್ರಹಿಸುವ ನಿರೀಕ್ಷೆಯನ್ನು ಪ್ರಾಧಿಕಾರ ವ್ಯಕ್ತಪಡಿಸಿದೆ. ಇದರ ಮೂಲಕ ಬಡಾವಣೆಗಳ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಮತ್ತು ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಭಾರಿ ಹೂಡಿಕೆ ಮಾಡಲು ಯೋಜನೆ ರೂಪಿಸಲಾಗಿದೆ.

ಬಜೆಟ್‌ನಲ್ಲಿ ಆದಾಯ-ವೆಚ್ಚದ ಅಂದಾಜು
ಪ್ರಾಧಿಕಾರದ ಬಜೆಟ್ ಪ್ರಸ್ತಾವನೆಯಲ್ಲಿ, ಬಡಾವಣೆಗಳ ಅಭಿವೃದ್ಧಿ ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ 579.18 ಕೋಟಿ ರೂಪಾಯಿ ವೆಚ್ಚ ಮಾಡುವ ಯೋಜನೆಯಿದೆ. ಈ ವೆಚ್ಚ ಕಡಿತಗೊಳಿಸಿದ ನಂತರ ಪ್ರಾಧಿಕಾರಕ್ಕೆ ಸುಮಾರು 220.72 ಕೋಟಿ ರೂಪಾಯಿ ನಿವ್ವಳ ಆದಾಯ ದೊರೆಯುವ ನಿರೀಕ್ಷೆಯಿದೆ. ಇದು ಪ್ರಾಧಿಕಾರದ ಹಣಕಾಸಿನ ಸ್ಥಿರತೆಯನ್ನು ಬಲಪಡಿಸುವುದರ ಜೊತೆಗೆ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ದಾರಿ ಮಾಡಿಕೊಡಲಿದೆ.

ಪ್ರಮುಖ ಯೋಜನೆಗಳಿಗೆ ಆದ್ಯತೆ
ಬಜೆಟ್‌ನಲ್ಲಿ ಮೈಸೂರು ನಗರದ ಮೂಲಸೌಕರ್ಯ ವಿಸ್ತರಣೆಗೆ ವಿಶೇಷ ಗಮನ ನೀಡಲಾಗಿದೆ.
– ನಗರದ ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿ
– ಕೆರೆಗಳ ಪುನರುಜ್ಜೀವನ
– ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವುದು
– ಕಬಿನಿ ಯೋಜನೆಯ ಉನ್ನತೀಕರಣ

ಈ ಎಲ್ಲಾ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ನಗರದ ಸಾರಿಗೆ ಮತ್ತು ಪರಿಸರ ಸುಧಾರಣೆಗೆ ಇವು ಸಹಕಾರಿಯಾಗಲಿವೆ ಎಂದು ಎಂಡಿಎ ಆಯುಕ್ತ ರಕ್ಷಿತ್ ಹೇಳಿದ್ದಾರೆ.

ಹೊಸ ಬಡಾವಣೆಗಳ ನಿರ್ಮಾಣಕ್ಕೆ ಭಾರಿ ಹೂಡಿಕೆ
ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬೊಮ್ಮೇನಹಳ್ಳಿ, ಕಮರಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರೈತರ ಸಹಭಾಗಿತ್ವದಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪುಗೊಂಡಿದೆ. ಈ ಯೋಜನೆಗೆ ಮಾತ್ರ 460 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದರ ಜೊತೆಗೆ, ಮೈಸೂರಿನ ವಿಜಯಶ್ರೀಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 90 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ 20 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ. ಈ ಬಡಾವಣೆಗಳು ನಗರದ ವಿಸ್ತರಣೆಗೆ ಹೊಸ ಆಯಾಮ ನೀಡಲಿವೆ ಎಂದು ನಿರೀಕ್ಷಿಸಲಾಗಿದೆ.

ಈ ಬಜೆಟ್ ನಗರದ ಮೂಲಸೌಕರ್ಯ ವಿಸ್ತರಣೆ ಮತ್ತು ಹೊಸ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿದೆ. ರೈತರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುವುದು. ಒಟ್ಟಾರೆಯಾಗಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಈ ಬಜೆಟ್ ನಗರವನ್ನು ಆಧುನಿಕ ಮತ್ತು ನಿವಾಸಯೋಗ್ಯವಾಗಿ ರೂಪಿಸುವತ್ತ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಎಂಡಿಎ ಆಯುಕ್ತ ರಕ್ಷಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago