ಮೈಸೂರು ನಗರ

ಮೈಸೂರು | ದಾಖಲೆ ಮೊತ್ತಕ್ಕೆ ಹರಾಜದ ಎಂಡಿಎ ನಿವೇಶನ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಇದೇ ಮೊಟ್ಟ ಮೊದಲ ಬಾರಿ ಕರೆದಿದ್ದ ನಿವೇಶನಗಳ ಬಹಿರಂಗ ಹರಾಜು ಪ್ರಾಧಿಕಾರಕ್ಕೆ ಬಂಪರ್ ಮೊತ್ತ ಸಂಗ್ರಹಿಸಲು ನೆರವಾಗಿದೆ. ನಿವೇಶನಗಳ ಹರಾಜು ದಾಖಲೆ ಮೊತ್ತಕ್ಕೆ ಮಾರಾಟವಾಗಿರುವುದು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಉಬ್ಬೇರಿಸುವಂತೆ ಮಾಡಿದೆ.

ಕೆಲ ದಿನಗಳ ಹಿಂದಷ್ಟೆ ಆನ್ ಲೈನ್ ಹರಾಜು ಆಹ್ವಾನಿಸಲಾಗಿತ್ತು. ಈ ಹರಾಜಿನಲ್ಲಿ ಆಸಕ್ತಿ ವಹಿಸಿ ಅನೇಕರು ಬಿಡ್ ನಲ್ಲಿ ಭಾಗವಹಿಸಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹೆಸರು ಬದಲಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರವಾದ ಮೇಲೆ ಇದೇ ಮೊದಲ ನಿವೇಶನಗಳ ಬಹಿರಂಗ ಹರಾಜು ಪ್ರಕ್ರಿಯೆಯಾಗಿತ್ತು. ಎಂಡಿಎ ನೂತನ ಆಯುಕ್ತರಾಗಿ ಕೆ.ಆರ್. ರಕ್ಷಿತ್ ಅವರನ್ನು ನೇಮಕಗೊಳಿಸಲಾಗಿತ್ತು. ಅಧಿಕಾರ ವಹಿಸಿಕೊಂಡ ಬಳಿಕ ಪ್ರಾಧಿಕಾರದ ವ್ಯವಸ್ಥೆಯನ್ನು ಸರಿದಾರಿಗೆ ತರುವಲ್ಲಿ ಶ್ರಮಿಸಿದ ರಕ್ಷಿತ್ ಕೆಲ ದಿನಗಳಲ್ಲೇ ಖಾಲಿ ನಿವೇಶನಗಳ ಪಟ್ಟಿ ಸಿದ್ಧಪಡಿಸಿ ಬಹಿರಂಗ ಹರಾಜಿಗೆ ಪ್ರಕಟಣೆ ಹೊರಡಿಸಿದರು.

ಈ ನಿರ್ಧಾರದಿಂದ ಈಗ ಪ್ರಾಧಿಕಾರಕ್ಕೆ ಕೋಟ್ಯಾಂತರ ರೂ. ಆದಾಯ ಸಂಗ್ರಹಗೊಂಡಿದೆ.

ಮಾಹಿತಿಗಳ ಪ್ರಕಾರ ದಾಖಲೆ ಮೊತ್ತಕ್ಕೆ ಹರಾಜುಗೊಂಡ ನಿವೇಶನಗಳ ಮಾಹಿತಿ ಹೀಗಿದೆ.

ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 109/4 (600 sqft – 20 X 30 ) ಹರಾಜು ಮೊತ್ತ 2 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 33,000 ರೂ.

ಅದೇ ರೀತಿ ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 10298 (4000 sqft- 50X80) ಹರಾಜು ಮೊತ್ತ 9 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 22500 ರೂ.

ಗಗನಕ್ಕೇರಿದ ಬೆಲೆ
ಈ ಹರಾಜು ಪ್ರಕ್ರಿಯೆಯಿಂದ ಈಗ ಮೈಸೂರು ನಗರದಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದಂತಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಈಗಾಗಲೇ ನಿವೇಶನಗಳ ಬೆಲೆ ಮುಗಿಲು ಮುಟ್ಟಿದ್ದು ಮಧ್ಯಮ ವರ್ಗದವರಿಗೆ ನಿವೇಶನ ಖರೀದಿ ಗಗನ ಕುಸುಮವಾಗಿದೆ. ಈಗ ಮೈಸೂರು ನಗರದಲ್ಲೂ ಮುಂಬರುವ ದಿನಗಳಲ್ಲಿ ಅದೇ ಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಈ ಹರಾಜು ಪ್ರಕ್ರಿಯೆಯಿಂದ ಗೋಚರಿಸುತ್ತಿದೆ.

ಪ್ರಾಧಿಕಾರ ಹರಾಜು ಮಾಡಿದ ನಿವೇಶನಗಳ ಮೊತ್ತ ಈ ಮಟ್ಟದಲ್ಲಿ ಏರಿಕೆಗೊಂಡಿರುವ ಕಾರಣ, ಇನ್ಮುಂದೆ ಮೈಸೂರಿನ ಇತರೆ ನಿವೇಶನಗಳ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ಅಭಿಪ್ರಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

15 mins ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

45 mins ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

2 hours ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

3 hours ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

11 hours ago