mda sitemda site
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಇದೇ ಮೊಟ್ಟ ಮೊದಲ ಬಾರಿ ಕರೆದಿದ್ದ ನಿವೇಶನಗಳ ಬಹಿರಂಗ ಹರಾಜು ಪ್ರಾಧಿಕಾರಕ್ಕೆ ಬಂಪರ್ ಮೊತ್ತ ಸಂಗ್ರಹಿಸಲು ನೆರವಾಗಿದೆ. ನಿವೇಶನಗಳ ಹರಾಜು ದಾಖಲೆ ಮೊತ್ತಕ್ಕೆ ಮಾರಾಟವಾಗಿರುವುದು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಉಬ್ಬೇರಿಸುವಂತೆ ಮಾಡಿದೆ.
ಕೆಲ ದಿನಗಳ ಹಿಂದಷ್ಟೆ ಆನ್ ಲೈನ್ ಹರಾಜು ಆಹ್ವಾನಿಸಲಾಗಿತ್ತು. ಈ ಹರಾಜಿನಲ್ಲಿ ಆಸಕ್ತಿ ವಹಿಸಿ ಅನೇಕರು ಬಿಡ್ ನಲ್ಲಿ ಭಾಗವಹಿಸಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹೆಸರು ಬದಲಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರವಾದ ಮೇಲೆ ಇದೇ ಮೊದಲ ನಿವೇಶನಗಳ ಬಹಿರಂಗ ಹರಾಜು ಪ್ರಕ್ರಿಯೆಯಾಗಿತ್ತು. ಎಂಡಿಎ ನೂತನ ಆಯುಕ್ತರಾಗಿ ಕೆ.ಆರ್. ರಕ್ಷಿತ್ ಅವರನ್ನು ನೇಮಕಗೊಳಿಸಲಾಗಿತ್ತು. ಅಧಿಕಾರ ವಹಿಸಿಕೊಂಡ ಬಳಿಕ ಪ್ರಾಧಿಕಾರದ ವ್ಯವಸ್ಥೆಯನ್ನು ಸರಿದಾರಿಗೆ ತರುವಲ್ಲಿ ಶ್ರಮಿಸಿದ ರಕ್ಷಿತ್ ಕೆಲ ದಿನಗಳಲ್ಲೇ ಖಾಲಿ ನಿವೇಶನಗಳ ಪಟ್ಟಿ ಸಿದ್ಧಪಡಿಸಿ ಬಹಿರಂಗ ಹರಾಜಿಗೆ ಪ್ರಕಟಣೆ ಹೊರಡಿಸಿದರು.
ಈ ನಿರ್ಧಾರದಿಂದ ಈಗ ಪ್ರಾಧಿಕಾರಕ್ಕೆ ಕೋಟ್ಯಾಂತರ ರೂ. ಆದಾಯ ಸಂಗ್ರಹಗೊಂಡಿದೆ.
ಮಾಹಿತಿಗಳ ಪ್ರಕಾರ ದಾಖಲೆ ಮೊತ್ತಕ್ಕೆ ಹರಾಜುಗೊಂಡ ನಿವೇಶನಗಳ ಮಾಹಿತಿ ಹೀಗಿದೆ.
ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 109/4 (600 sqft – 20 X 30 ) ಹರಾಜು ಮೊತ್ತ 2 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 33,000 ರೂ.
ಅದೇ ರೀತಿ ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 10298 (4000 sqft- 50X80) ಹರಾಜು ಮೊತ್ತ 9 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 22500 ರೂ.
ಗಗನಕ್ಕೇರಿದ ಬೆಲೆ
ಈ ಹರಾಜು ಪ್ರಕ್ರಿಯೆಯಿಂದ ಈಗ ಮೈಸೂರು ನಗರದಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದಂತಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಈಗಾಗಲೇ ನಿವೇಶನಗಳ ಬೆಲೆ ಮುಗಿಲು ಮುಟ್ಟಿದ್ದು ಮಧ್ಯಮ ವರ್ಗದವರಿಗೆ ನಿವೇಶನ ಖರೀದಿ ಗಗನ ಕುಸುಮವಾಗಿದೆ. ಈಗ ಮೈಸೂರು ನಗರದಲ್ಲೂ ಮುಂಬರುವ ದಿನಗಳಲ್ಲಿ ಅದೇ ಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಈ ಹರಾಜು ಪ್ರಕ್ರಿಯೆಯಿಂದ ಗೋಚರಿಸುತ್ತಿದೆ.
ಪ್ರಾಧಿಕಾರ ಹರಾಜು ಮಾಡಿದ ನಿವೇಶನಗಳ ಮೊತ್ತ ಈ ಮಟ್ಟದಲ್ಲಿ ಏರಿಕೆಗೊಂಡಿರುವ ಕಾರಣ, ಇನ್ಮುಂದೆ ಮೈಸೂರಿನ ಇತರೆ ನಿವೇಶನಗಳ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ಅಭಿಪ್ರಾಯಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…