mda sitemda site
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಇದೇ ಮೊಟ್ಟ ಮೊದಲ ಬಾರಿ ಕರೆದಿದ್ದ ನಿವೇಶನಗಳ ಬಹಿರಂಗ ಹರಾಜು ಪ್ರಾಧಿಕಾರಕ್ಕೆ ಬಂಪರ್ ಮೊತ್ತ ಸಂಗ್ರಹಿಸಲು ನೆರವಾಗಿದೆ. ನಿವೇಶನಗಳ ಹರಾಜು ದಾಖಲೆ ಮೊತ್ತಕ್ಕೆ ಮಾರಾಟವಾಗಿರುವುದು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಉಬ್ಬೇರಿಸುವಂತೆ ಮಾಡಿದೆ.
ಕೆಲ ದಿನಗಳ ಹಿಂದಷ್ಟೆ ಆನ್ ಲೈನ್ ಹರಾಜು ಆಹ್ವಾನಿಸಲಾಗಿತ್ತು. ಈ ಹರಾಜಿನಲ್ಲಿ ಆಸಕ್ತಿ ವಹಿಸಿ ಅನೇಕರು ಬಿಡ್ ನಲ್ಲಿ ಭಾಗವಹಿಸಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹೆಸರು ಬದಲಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರವಾದ ಮೇಲೆ ಇದೇ ಮೊದಲ ನಿವೇಶನಗಳ ಬಹಿರಂಗ ಹರಾಜು ಪ್ರಕ್ರಿಯೆಯಾಗಿತ್ತು. ಎಂಡಿಎ ನೂತನ ಆಯುಕ್ತರಾಗಿ ಕೆ.ಆರ್. ರಕ್ಷಿತ್ ಅವರನ್ನು ನೇಮಕಗೊಳಿಸಲಾಗಿತ್ತು. ಅಧಿಕಾರ ವಹಿಸಿಕೊಂಡ ಬಳಿಕ ಪ್ರಾಧಿಕಾರದ ವ್ಯವಸ್ಥೆಯನ್ನು ಸರಿದಾರಿಗೆ ತರುವಲ್ಲಿ ಶ್ರಮಿಸಿದ ರಕ್ಷಿತ್ ಕೆಲ ದಿನಗಳಲ್ಲೇ ಖಾಲಿ ನಿವೇಶನಗಳ ಪಟ್ಟಿ ಸಿದ್ಧಪಡಿಸಿ ಬಹಿರಂಗ ಹರಾಜಿಗೆ ಪ್ರಕಟಣೆ ಹೊರಡಿಸಿದರು.
ಈ ನಿರ್ಧಾರದಿಂದ ಈಗ ಪ್ರಾಧಿಕಾರಕ್ಕೆ ಕೋಟ್ಯಾಂತರ ರೂ. ಆದಾಯ ಸಂಗ್ರಹಗೊಂಡಿದೆ.
ಮಾಹಿತಿಗಳ ಪ್ರಕಾರ ದಾಖಲೆ ಮೊತ್ತಕ್ಕೆ ಹರಾಜುಗೊಂಡ ನಿವೇಶನಗಳ ಮಾಹಿತಿ ಹೀಗಿದೆ.
ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 109/4 (600 sqft – 20 X 30 ) ಹರಾಜು ಮೊತ್ತ 2 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 33,000 ರೂ.
ಅದೇ ರೀತಿ ವಿಜಯನಗರ 4 ನೇ ಹಂತ, 2 ನೇ ಫೇಸ್ ನ ನಿವೇಶನ ಸಂಖ್ಯೆ 10298 (4000 sqft- 50X80) ಹರಾಜು ಮೊತ್ತ 9 ಕೋಟಿ ರೂ. ನಿವೇಶನದ ಚದರ ಅಡಿ ಮೊತ್ತ 22500 ರೂ.
ಗಗನಕ್ಕೇರಿದ ಬೆಲೆ
ಈ ಹರಾಜು ಪ್ರಕ್ರಿಯೆಯಿಂದ ಈಗ ಮೈಸೂರು ನಗರದಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದಂತಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಈಗಾಗಲೇ ನಿವೇಶನಗಳ ಬೆಲೆ ಮುಗಿಲು ಮುಟ್ಟಿದ್ದು ಮಧ್ಯಮ ವರ್ಗದವರಿಗೆ ನಿವೇಶನ ಖರೀದಿ ಗಗನ ಕುಸುಮವಾಗಿದೆ. ಈಗ ಮೈಸೂರು ನಗರದಲ್ಲೂ ಮುಂಬರುವ ದಿನಗಳಲ್ಲಿ ಅದೇ ಸ್ಥಿತಿ ನಿರ್ಮಾಣವಾಗುವ ಲಕ್ಷಣಗಳು ಈ ಹರಾಜು ಪ್ರಕ್ರಿಯೆಯಿಂದ ಗೋಚರಿಸುತ್ತಿದೆ.
ಪ್ರಾಧಿಕಾರ ಹರಾಜು ಮಾಡಿದ ನಿವೇಶನಗಳ ಮೊತ್ತ ಈ ಮಟ್ಟದಲ್ಲಿ ಏರಿಕೆಗೊಂಡಿರುವ ಕಾರಣ, ಇನ್ಮುಂದೆ ಮೈಸೂರಿನ ಇತರೆ ನಿವೇಶನಗಳ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ಅಭಿಪ್ರಾಯಿಸಿದ್ದಾರೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…