ಮೈಸೂರು ನಗರ

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ ಎಂದು ಸೆಸ್ಕ್ ಅಧ್ಯಕ್ಷರೂ ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವತಿಯಿಂದ ಮೈಸೂರಿನ ವಿ.ವಿ.ಮೊಹಲ್ಲಾದಲ್ಲಿರುವ ಸೆಸ್ಕ್‌ನ ಕಾರ್ಯ ಮತ್ತು ಪಾಲನಾ ವಿಭಾಗದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಲೈನ್‌ಮ್ಯಾನ್‌ ದಿವಸ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆ ಮತ್ತು ಸಿಬ್ಬಂದಿ ನಡುವೆ ಪರಸ್ಪರ ನಂಬಿಕೆ ಹಾಗೂ ವಿಶ್ವಾಸದಿಂದ ಕೆಲಸ ನಡೆಯುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ಹೀಗಾಗಿ ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ ಯಾವುದೇ ಅವಘಡಗಳು ಸಂಭವಿಸದಂತೆ ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ. ಆದ್ದರಿಂದ ವಿದ್ಯುತ್ ಅವಘಡಗಳನ್ನು ತಗ್ಗಿಸುವಲ್ಲಿ ಹಾಗೂ ಲೈನ್‌ಮ್ಯಾನ್‌ಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಫೀಡರ್‌ಗಳ ನಿರ್ವಹಣೆಗೆ ಕ್ರಮಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ವಿದ್ಯುತ್ ಅವಘಡಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ, ಗ್ರಾಹಕರುಗಳಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಿ ಸೆಸ್ಕ್‌ನ ವಿಶ್ವಾಸಾರ್ಹತೆ ಹೆಚ್ಚಿಸಿರುವ 10ಕ್ಕೂ ಹೆಚ್ಚು ಲೈನ್‌ಮ್ಯಾನ್‌ಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಇದಕ್ಕೂ ಮುನ್ನ ಲೈನ್‌ಮ್ಯಾನ್‌ಗಳಿಗೆ ಸುರಕ್ಷತೆ ಮತ್ತು ಜವಾಬ್ದಾರಿಯ ಕುರಿತಂತೆ ಸುರಕ್ಷತಾ ಮಂತ್ರವನ್ನು ಬೋಧಿಸಲಾಯಿತು.

ಸಮಾರಂಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ.ದಿವಾಕರ್‌, ವಿವಿ ಮೊಹಲ್ಲಾ ವಿಭಾಗದ ಕಾರ್ಯಪಾಲಕ ಅಭಿಯಂತರ ಡಿ. ಸಂದೀಪ್‌, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ(659)ದ ಉಪಾಧ್ಯಕ್ಷ ಎಚ್‌.ವಿ. ಸಂದೀಪ್‌ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಲೈನ್‌ಮ್ಯಾನ್‌ಗಳು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

9 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

10 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

11 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

11 hours ago