ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ, ನಾಳೆ (24/12/2025) ಬೆಳಿಗ್ಗೆ 11.30ಕ್ಕೆ ಪೂರ್ವಭಾವಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಅಹಿಂದ ಸಮಾವೇಶದ ರೂಪುರೇಷೆಗಳು, ದಿನಾಂಕ ಹಾಗೂ ಸ್ಥಳದ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನು ಓದಿ: ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
‘ಸಿದ್ದರಾಮಯ್ಯ ಇವತ್ತಿನ ಅನಿವಾರ್ಯತೆ’ ಎಂಬ ಘೋಷಣೆಯೊಂದಿಗೆ ಸಮಾವೇಶ ಆಯೋಜನೆಗೆ ತಯಾರಿ ನಡೆಸಲಾಗಿದ್ದು, ಅಹಿಂದ ವರ್ಗಗಳ ಏಕತೆಯನ್ನು ಪ್ರದರ್ಶಿಸುವುದು ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸುವುದೇ ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ.
ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ನಡೆಯಲಿರುವ ಈ ಸಭೆಗೆ ರಾಜಕೀಯ ಮಹತ್ವ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಇದರ ಪರಿಣಾಮ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…