ಮೈಸೂರು ನಗರ

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ, ನಾಳೆ (24/12/2025) ಬೆಳಿಗ್ಗೆ 11.30ಕ್ಕೆ ಪೂರ್ವಭಾವಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಅಹಿಂದ ಸಮಾವೇಶದ ರೂಪುರೇಷೆಗಳು, ದಿನಾಂಕ ಹಾಗೂ ಸ್ಥಳದ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನು ಓದಿ: ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ

‘ಸಿದ್ದರಾಮಯ್ಯ ಇವತ್ತಿನ ಅನಿವಾರ್ಯತೆ’ ಎಂಬ ಘೋಷಣೆಯೊಂದಿಗೆ ಸಮಾವೇಶ ಆಯೋಜನೆಗೆ ತಯಾರಿ ನಡೆಸಲಾಗಿದ್ದು, ಅಹಿಂದ ವರ್ಗಗಳ ಏಕತೆಯನ್ನು ಪ್ರದರ್ಶಿಸುವುದು ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸುವುದೇ ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ.

ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ನಡೆಯಲಿರುವ ಈ ಸಭೆಗೆ ರಾಜಕೀಯ ಮಹತ್ವ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಇದರ ಪರಿಣಾಮ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

9 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago