ganja case
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ನಿನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರೇ ಖುದ್ದು ಫೀಲ್ಡ್ಗೆ ಇಳಿದಿದ್ದಾರೆ.
ತಡರಾತ್ರಿ ಮಂಡಿ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಮಿಡ್ನೈಟ್ ಕಾರ್ಯಾಚರಣೆ ನಡೆದಿದ್ದು, 26 ಮಂದಿ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದಾರೆ. ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆಯಲಾಗಿದ್ದು, ಮಂಡಿ, ಮೊಹಲ್ಲಾ, ಉದಯಗಿರಿ, ಎನ್.ಆರ್.ಮೊಹಲ್ಲಾ, ನಜರ್ಬಾದ್, ಕೆ.ಆರ್.ಮೊಹಲ್ಲಾ ಸೇರಿದಂತೆ ಹಲವು ಪಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.
ಡಿಸಿಪಿಗಳು, ಎಸಿಪಿಗಳು ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 59 ಗೋದಾಮುಗಳನ್ನು ಪರಿಶೀಲನೆ ಮಾಡಲಾಗಿದೆ. ಹಾಸ್ಟೆಲ್ಗಳು ಸೇರಿದಂತೆ ಹಲವು ಕಡೆ ತಪಾಸಣೆ ನಡೆಸಲಾಗಿದ್ದು, ಈ ಹಿಂದೆ ಗಾಂಜಾ ಮಾರಾಟ ಮಾಡುತ್ತಿದ್ದ 35 ಜನರನ್ನು ವಿಚಾರಣೆ ನಡೆಸಿದ್ದಾರೆ. ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿರುವ ಸಾಧ್ಯತೆಯಿದ್ದು, ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…