ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತಪ್ಪು ಮಾಡಿದ್ರೆ ಚಾಮುಂಡೇಶ್ವರಿ ಬಳಿ ಆಣೆ ಮಾಡುತ್ತೇನೆ ಬನ್ನಿ ಎಂದಿದ್ದೆ. ಆಣೆ ಪ್ರಮಾಣಕ್ಕೆ ಅವರು ಬರಲಿಲ್ಲ. ಲೋಕಾಯುಕ್ತ ಕೊಟ್ಟಿರುವ ರಿಪೋರ್ಟ್ಗೂ ನಮಗೂ ಸಂಬಂಧವಿಲ್ಲ. ಪ್ರಕರಣದಲ್ಲಿ ಯಾವುದೇ ತಪ್ಪು ಕಾಣಿಸಿಲ್ಲ, ಅದನ್ನೇ ಬಿ ರಿಪೋರ್ಟ್ ಮಾಡಿದ್ದಾರೆ. ಲೋಕಾಯುಕ್ತ ವರದಿಯನ್ನು ನಾನು ಸ್ವಾಗತಿಸುತ್ತೇನೆ. ಮುಡಾ ಹಗರಣದಲ್ಲಿ ನಾನಾಗಲಿ, ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತರು ಸತ್ಯ ಸತ್ಯತೆ ಕಂಡು ಹಿಡಿದಿದ್ದಾರೆ. ಅವರಂತೆ ಇಡಿ ಅಧಿಕಾರಿಗಳು ಸಹ ತನಿಖೆ ಮಾಡಲಿ ಎಂದು ಆಗ್ರಹಿಸಿದರು.
ಇನ್ನು 50:50 ಸೈಟ್ ತಗೊಂಡಿರೋದು ಸರಿ ತಪ್ಪು ಎಂದು ಹೇಳೋದಿಲ್ಲ. ಜಾಗ ಕಳೆದುಕೊಂಡಿರುವವರಿಗೆ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…