ಮೈಸೂರು ನಗರ

ಲೋಕಾ ವರದಿ ಟೀಕಿಸುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ: ಸಚಿವ ಭೈರತಿ ಸುರೇಶ್‌ ಕಿಡಿ

ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತಪ್ಪು ಮಾಡಿದ್ರೆ ಚಾಮುಂಡೇಶ್ವರಿ ಬಳಿ ಆಣೆ ಮಾಡುತ್ತೇನೆ ಬನ್ನಿ ಎಂದಿದ್ದೆ. ಆಣೆ ಪ್ರಮಾಣಕ್ಕೆ ಅವರು ಬರಲಿಲ್ಲ. ಲೋಕಾಯುಕ್ತ ಕೊಟ್ಟಿರುವ ರಿಪೋರ್ಟ್‌ಗೂ ನಮಗೂ ಸಂಬಂಧವಿಲ್ಲ. ಪ್ರಕರಣದಲ್ಲಿ ಯಾವುದೇ ತಪ್ಪು ಕಾಣಿಸಿಲ್ಲ, ಅದನ್ನೇ ಬಿ ರಿಪೋರ್ಟ್ ಮಾಡಿದ್ದಾರೆ. ಲೋಕಾಯುಕ್ತ ವರದಿಯನ್ನು ನಾನು ಸ್ವಾಗತಿಸುತ್ತೇನೆ. ಮುಡಾ ಹಗರಣದಲ್ಲಿ ನಾನಾಗಲಿ, ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತರು ಸತ್ಯ ಸತ್ಯತೆ ಕಂಡು ಹಿಡಿದಿದ್ದಾರೆ. ಅವರಂತೆ ಇಡಿ ಅಧಿಕಾರಿಗಳು ಸಹ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

ಇನ್ನು 50:50 ಸೈಟ್ ತಗೊಂಡಿರೋದು ಸರಿ ತಪ್ಪು ಎಂದು ಹೇಳೋದಿಲ್ಲ. ಜಾಗ ಕಳೆದುಕೊಂಡಿರುವವರಿಗೆ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

6 mins ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

11 mins ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

16 mins ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

21 mins ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

10 hours ago