ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತಪ್ಪು ಮಾಡಿದ್ರೆ ಚಾಮುಂಡೇಶ್ವರಿ ಬಳಿ ಆಣೆ ಮಾಡುತ್ತೇನೆ ಬನ್ನಿ ಎಂದಿದ್ದೆ. ಆಣೆ ಪ್ರಮಾಣಕ್ಕೆ ಅವರು ಬರಲಿಲ್ಲ. ಲೋಕಾಯುಕ್ತ ಕೊಟ್ಟಿರುವ ರಿಪೋರ್ಟ್ಗೂ ನಮಗೂ ಸಂಬಂಧವಿಲ್ಲ. ಪ್ರಕರಣದಲ್ಲಿ ಯಾವುದೇ ತಪ್ಪು ಕಾಣಿಸಿಲ್ಲ, ಅದನ್ನೇ ಬಿ ರಿಪೋರ್ಟ್ ಮಾಡಿದ್ದಾರೆ. ಲೋಕಾಯುಕ್ತ ವರದಿಯನ್ನು ನಾನು ಸ್ವಾಗತಿಸುತ್ತೇನೆ. ಮುಡಾ ಹಗರಣದಲ್ಲಿ ನಾನಾಗಲಿ, ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತರು ಸತ್ಯ ಸತ್ಯತೆ ಕಂಡು ಹಿಡಿದಿದ್ದಾರೆ. ಅವರಂತೆ ಇಡಿ ಅಧಿಕಾರಿಗಳು ಸಹ ತನಿಖೆ ಮಾಡಲಿ ಎಂದು ಆಗ್ರಹಿಸಿದರು.
ಇನ್ನು 50:50 ಸೈಟ್ ತಗೊಂಡಿರೋದು ಸರಿ ತಪ್ಪು ಎಂದು ಹೇಳೋದಿಲ್ಲ. ಜಾಗ ಕಳೆದುಕೊಂಡಿರುವವರಿಗೆ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…